ರಂದೀಪ್ ಸುರ್ಜೆವಾಲಾ 
ದೇಶ

ಬಿಜೆಪಿ ಆತಿಥ್ಯ ತಿರಸ್ಕರಿಸಿ, ಮರಳಿ ಕಾಂಗ್ರೆಸ್ ಕುಟುಂಬ ಸೇರಿ: ಸಚಿನ್ ಪೈಲಟ್ ಗೆ ಸುರ್ಜೇವಾಲಾ

ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಬಿಜೆಪಿ ಸೇರುತ್ತಿಲ್ಲ ಎನ್ನುವುದಾದರೆ ಕೇಸರಿ ಪಕ್ಷದ ಆತಿಥ್ಯ ಸ್ವೀಕರಿಸುವುದನ್ನು ಬಿಟ್ಟು ಮರಳಿ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ ಅವರು ಬುಧವಾರ ಹೇಳಿದ್ದಾರೆ.

ಜೈಪುರ್: ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಬಿಜೆಪಿ ಸೇರುತ್ತಿಲ್ಲ ಎನ್ನುವುದಾದರೆ ಕೇಸರಿ ಪಕ್ಷದ ಆತಿಥ್ಯ ಸ್ವೀಕರಿಸುವುದನ್ನು ಬಿಟ್ಟು ಮರಳಿ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ ಅವರು ಬುಧವಾರ ಹೇಳಿದ್ದಾರೆ.

ಸಚಿನ್ ಪೈಲಟ್ ಅವರು ತಾನು ಬಿಜೆಪಿ ಸೇರುತ್ತಿಲ್ಲ ಎಂದು ಹೇಳಿಕೆ ನೀಡಿರುವುದನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ನೀವು ಬಿಜೆಪಿ ಹೋಗಲು ಬಯಸುವುದಿಲ್ಲ ಎನ್ನುವುದಾದರೆ. ಆ ಪಕ್ಷದ ಆತಿಥ್ಯ ತಿರಸ್ಕರಿಸಿ ಮರಳಿ ಕಾಂಗ್ರೆಸ್ ಕುಟುಂಬಕ್ಕೆ ಬನ್ನಿ ಎಂದು ಸುರ್ಜೇವಾಲಾ ಅವರು ಮನವಿ ಮಾಡಿದ್ದಾರೆ.

ಪೈಲಟ್ ಅವರು ಮೊದಲು ಐಷಾರಾಮಿ ಹೋಟೆಲ್ ನಲ್ಲಿ ಹರಿಯಾಣ ಪೊಲೀಸರ ಭದ್ರತೆಯಲ್ಲಿರುವ ಕಾಂಗ್ರೆಸ್ ಶಾಸಕರನ್ನು ಬಿಟ್ಟು ಕಳುಹಿಸಲಿ ಎಂದು ಸುರ್ಜೇವಾಲಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ನಮ್ಮ ಪಕ್ಷದ ನಾಯಕರು ಸಚಿನ್ ಪೈಲಟ್ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದರೂ ಅವರು ಮತ್ತು ಅವರ ಬೆಂಬಲಿತ ಕೆಲವು ಶಾಸಕರು ಶಾಸಕಾಂಗ ಪಕ್ಷದ ಸಭೆಗೆ ಗೈರು ಆದರು ಎಂದು ಸುರ್ಜೇವಾಲಾ ಅವರು ಹೇಳಿದ್ದಾರೆ.

ಸದ್ಯ ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿತ ಕಾಂಗ್ರೆಸ್ ಶಾಸಕರು ಬಿಜೆಪಿ ಆಡಳಿತವಿರುವ ಹರಿಯಾಣದ ಗುರುಗ್ರಾಮದ ಐಷಾರಾಮಿ ಹೋಟೆಲ್ ವೊಂದರಲ್ಲಿ ತಂಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT