ಸಚಿನ್ ಪೈಲಟ್ 
ದೇಶ

ಸಚಿನ್ ಪೈಲಟ್, 18 ಶಾಸಕರಿಗೆ ಅನರ್ಹತೆ ನೋಟಿಸ್; ಸ್ಪೀಕರ್ ಅಧಿಕಾರ ವಿವಾದ ಮತ್ತೆ ಮುನ್ನೆಲೆಗೆ!

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸ್ಪೀಕರ್ ಅಧಿಕಾರ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ನವದೆಹಲಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸ್ಪೀಕರ್ ಅಧಿಕಾರ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ಸಚಿನ್ ಪೈಲಟ್ ಹಾಗೂ ಇತರ 18 ಶಾಸಕರನ್ನು ಅನರ್ಹಗೊಳಿಸಲು ಆಡಳಿತರೂಢ ಕಾಂಗ್ರೆಸ್  ಪಕ್ಷ ಸ್ಪೀಕರ್ ಕೋರಿದ್ದು, ಬಂಡಾಯ ಶಾಸಕರು ಮೂರು ದಿನಗೊಳಗೆ ಪ್ರತಿಕ್ರಿಯೆ ನೀಡುವಂತೆ ಸ್ಪೀಕರ್ ನೋಟಿಸ್ ನೀಡಿದ್ದಾರೆ.

ಸಂವಿಧಾನದ 10ನೇ ವಿಧಿ ಅಡಿಯಲ್ಲಿ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸ್ಪೀಕರ್ ಅಧಿಕಾರ ಬಗ್ಗೆ ಸುಪ್ರೀಂಕೋರ್ಟ್ ಕೂಡಾ ವಿವಿಧ  ನಾನಾ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

ರಾಜಸ್ಥಾನ ಆಸೆಂಬ್ಲಿ ಸ್ಪೀಕರ್  ಸಿ. ಪಿ. ಜೋಷಿ ನೀಡಿರುವ ಶೋ ಕಾಸ್ ನೋಟಿಸ್ ಗೆ ಸಂಬಂಧಿಸಿದ ವಿಚಾರದಲ್ಲಿ 2011ರಲ್ಲಿ ಕರ್ನಾಟಕ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸಚಿನ್ ಪೈಲಟ್ ಒಳಗೊಂಡಂತೆ 19 ಶಾಸಕರ ಬಲವನ್ನು ಹೆಚ್ಚಿಸುವ ಸಾಧ್ಯತೆ ಇದೆ.

2011ರಲ್ಲಿ  11 ಶಾಸಕರನ್ನು ಅನರ್ಹಗೊಳಿಸಿ ಆದೇಶಿಸಿದ ಸ್ಪೀಕರ್ ತೀರ್ಪನ್ನು ಸುಪ್ರೀಂ ಕೋರ್ಟ್ ಅಸಿಂಧುಗೊಳಿಸಿತ್ತು. ಯಡಿಯೂರಪ್ಪಗೆ ನಿಷ್ಠೆ ತೋರಲಿಲ್ಲವೆಂಬ ಒಂದೇ ಕಾರಣಕ್ಕೆ ಅವರನ್ನ ಅನರ್ಹತೆಗೊಳಿಸಿದ್ದು ಸ್ಪೀಕರ್ ಬೋಪಯ್ಯ ಅವರ ತಪ್ಪು ನಿರ್ಧಾರವಾಗಿದೆ ಎಂದು ನ್ಯಾಯಮೂರ್ತಿಗಳು ತಮ್ಮ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದ್ದರು. ಈಗ ಇದೇ ತೀರ್ಪನ್ನು ಆಧಾರವಾಗಿಟ್ಟುಕೊಂಡು ಸುಪ್ರೀಂ ಕೋರ್ಟ್ ತಮಗೆ  ನ್ಯಾಯ ಕೊಡಬಹುದು ಎಂಬ ವಿಶ್ವಾಸದಲ್ಲಿ ರಾಜಸ್ಥಾನದ 19 ಶಾಸಕರಿದ್ದಾರೆ.

ರಾಜಸ್ಥಾನ ಸ್ಪೀಕರ್ ಪೈಲಟ್ ಮತ್ತು ಇತರ 18 ಶಾಸಕರಿಗೆ ನೋಟಿಸ್ ನೀಡಿರುವುದು ಸಂವಿಧಾನದ 10 ವಿಧಿಯ ವ್ಯಾಪ್ತಿಯನ್ನು ಮೀರಿದೆ.ಅವರು ಬಿಜೆಪಿ ಸೇರುತ್ತೇವೆ ಅಥವಾ ಬೆಂಬಲಿಸುತ್ತೇವೆ ಎಂದು ಹೇಳಿಕೆ ನೀಡಿಲ್ಲ ಎಂದು ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ರಾಕೇಶ್ ದ್ವಿವೇದಿ ಹೇಳಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪ್ರತಿಭಟನೆ ಅಥವಾ ಅವರನ್ನು ಬದಲಾಯಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ ಮಾತ್ರಕ್ಕೆ ಬಂಡಾಯ ಶಾಸಕರು ಪಕ್ಷ ಬಿಟ್ಟು ಹೋದರು ಎಂಬರ್ಥವಲ್ಲಾ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT