ಸಂಗ್ರಹ ಚಿತ್ರ 
ದೇಶ

ಅಪಹರಣಕ್ಕೊಳಗಾಗಿದ್ದ ಬಿಜೆಪಿ ಮುಖಂಡನನ್ನು ರಕ್ಷಿಸಿದ ಜಮ್ಮು ಕಾಶ್ಮೀರ ಪೊಲೀಸರು

ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ಮುಖಂಡ ಮತ್ತು ಸೊಪೋರ್‌ ಜಿಲ್ಲೆಯ ವಾಟರ್‌ಗಾಮ್‌ ಪಾಲಿಕೆ ಸಮಿತಿ ಉಪಾಧ್ಯಕ್ಷ ಮೆಹ್ರಾಜುದಿನ್‌ ಮಲ್ಲಾ ಅವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡ ರಕ್ಷಿಸಿದೆ

ಶ್ರೀನಗರ: ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ಮುಖಂಡ ಮತ್ತು ಸೊಪೋರ್‌ ಜಿಲ್ಲೆಯ ವಾಟರ್‌ಗಾಮ್‌ ಪಾಲಿಕೆ ಸಮಿತಿ ಉಪಾಧ್ಯಕ್ಷ ಮೆಹ್ರಾಜುದಿನ್‌ ಮಲ್ಲಾ ಅವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡ ರಕ್ಷಿಸಿದೆ. 

ಬುಧವಾರ ಬೆಳಗ್ಗೆ ಮಲ್ಲಾ ಅವರು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಸೊಪೋರ್‌ನಲ್ಲಿ ಅಪಹರಿಸಿದ್ದರು. ಸೇನಾ ಪಡೆಗಳ ನೆರವಿನೊಂದಿಗೆ ಪೊಲೀಸರು ತೀವ್ರ ಶೋಧ ಕಾರ್ಯ ಕೈಗೊಂಡು ಸೊಪೋರ್‌ ಪಟ್ಟಣ ತೊರೆಯುವ ಮತ್ತು ಪ್ರವೇಶಿಸುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಿದ್ದರು. ಸಂಜೆ ಹೊತ್ತಿಗೆ ಅವರನ್ನು ರಕ್ಷಿಸಲಾಗಿದೆ. 

ಕಳೆದ ವಾರ ಬಂಡಿಪೊರ ಜಿಲ್ಲೆಯ ಬಿಜೆಪಿ ನಾಯಕ ವಾಸಿಮ್‌ ಬಾರಿ, ಅವರ ಸೋದರ ಮತ್ತು ತಂದೆಯನ್ನು ಉಗ್ರರು ಅಪಹರಿಸಿ ಹತ್ಯೆಗೈದಿದ್ದರು. ಈ ಘಟನೆಯಿಂದ ಕಣಿವೆಯಲ್ಲಿ ಬಿಜೆಪಿ ನಾಯಕರನ್ನು ಉಗ್ರರು ಗುರಿಯಾಗಿಸುತ್ತಿರುವ ಆತಂಕ ಮೂಡಿದೆ. ಹೀಗಾಗಿ ಬಿಜೆಪಿಯ ತಳ ಮಟ್ಟದ ಕಾರ್ಯಕರ್ತರಿಗೂ ರಕ್ಷಣೆ ನೀಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿರುವುದಾಗಿ ಬಿಜೆಪಿ ಮುಖಂಡ ಮನ್ಸೂರ್ ಅಜ್ಮದ್ ಭಟ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT