ವೈದ್ಯರು 
ದೇಶ

ಇನ್ನು ಮುಂದೆ ಎಲ್ಲಾ ವೈದ್ಯರು ಕೋವಿಡ್ ಪರೀಕ್ಷೆಗೆ ಶಿಫಾರಸ್ಸು ಮಾಡಬಹುದು: ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ಕೋವಿಡ್ -19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವೈದ್ಯರು ಕೊರೋನಾ ಸೋಂಕು ಪತ್ತೆಗೆ ಶಿಫಾರಸ್ಸು ಮಾಡಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಬೆಂಗಳೂರು: ದೇಶದಲ್ಲಿ ಕೋವಿಡ್ -19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವೈದ್ಯರು ಕೊರೋನಾ ಸೋಂಕು ಪತ್ತೆಗೆ ಶಿಫಾರಸ್ಸು ಮಾಡಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯ, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೋಂಕು ಪತ್ತೆ ಪರೀಕ್ಷೆ ನಡೆಸಲು, ಸೋಂಕಿನ ಮೂಲ ಹುಡುಕಿ ಚಿಕಿತ್ಸೆ ನೀಡುವ ಉದ್ದೇಶದಿಂದ ವೈದ್ಯರಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ ಮಾರ್ಗಸೂಚಿಯಂತೆ ದೇಶದಲ್ಲಿ ಕೋವಿಡ್ ಸೋಂಕು ಪತ್ತೆ ಪ್ರಯೋಗಾಲಯಗಳ ಸಂಖ್ಯೆ ಏರಿಕೆಯಾಗಿದ್ದು, ಐಸಿಎಂಆರ್ ಮಾರ್ಗಸೂಚಿಯಂತೆ ಸೋಂಕು ಪತ್ತೆ ಕಾರ್ಯ ಬಿರುಸುಗೊಂಡಿದೆ. ಸೋಂಕಿತರ ಗುಣಲಕ್ಷಗಳನ್ನು ನೋಡಿಕೊಂಡು ಸ್ವಾಬ್ ಟೆಸ್ಟ್ ಗೆ ಎಲ್ಲಾ ವೈದ್ಯರು ಶಿಫಾರಸ್ಸು ಮಾಡಬಹುದು ಎಂದು ಹೇಳಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,26,826 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ ದೇಶದಲ್ಲಿ 1.27 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಒಂದೇ ದಿನದಲ್ಲಿ 9 ಸಾವಿರದ 293 ಮಂದಿಗೆ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಪ್ರಸ್ತುತ 874 ಸರ್ಕಾರಿ ಮತ್ತು 360 ಖಾಸಗಿ ಪ್ರಯೋಗಾಲಯಗಳ ಮೂಲಕ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!

ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು: ನೋಡ್ರಪಾ, ನೀವು ಅದೆಲ್ಲಾ ಕನಸು ಕಾಣಲು ಹೋಗಬೇಡಿ; ವಿಪಕ್ಷಗಳ ಕಾಲೆಳೆದ ಡಿಕೆಶಿ

SCROLL FOR NEXT