ಸಾಂದರ್ಭಿಕ ಚಿತ್ರ 
ದೇಶ

ಪ್ರಿಯಕರನನೊಂದಿಗೆ ಕ್ವಾರಂಟೈನ್ ಆಗಲು ಇವನೇ ನನ್ನ ಪತಿ ಎಂದು ಸುಳ್ಳು ಹೇಳಿದ ಮಹಿಳಾ ಪೊಲೀಸ್ ಪೇದೆ!

ನಾಗಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವಿವಾಹಿತ ಮಹಿಳಾ ಕಾನ್‌ಸ್ಟೇಬಲ್‌ವೊಬ್ಬರು ತಾವು ಸಂಬಂಧ ಹೊಂದಿದ್ದ ವಿವಾಹಿತ ಪುರಷನೊಂದಿಗೆ ಕೌರಂಟೈನ್‌ ಆಗಿದ್ದಾರೆ.  ಇದಕ್ಕಾಗಿ ವ್ಯಕ್ತಿಯನ್ನು ತನ್ನ ಪತಿ ಎಂದು ಸ್ಥಳೀಯಾಡಳಿತದ ಬಳಿ ಸುಳ್ಳು ಹೇಳಿರುವುದು ಬಹಿರಂಗವಾಗಿದೆ. 

ನಾಗಪುರ: ನಾಗಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವಿವಾಹಿತ ಮಹಿಳಾ ಕಾನ್‌ಸ್ಟೇಬಲ್‌ವೊಬ್ಬರು ತಾವು ಸಂಬಂಧ ಹೊಂದಿದ್ದ ವಿವಾಹಿತ ಪುರಷನೊಂದಿಗೆ ಕೌರಂಟೈನ್‌ ಆಗಿದ್ದಾರೆ.  ಇದಕ್ಕಾಗಿ ವ್ಯಕ್ತಿಯನ್ನು ತನ್ನ ಪತಿ ಎಂದು ಸ್ಥಳೀಯಾಡಳಿತದ ಬಳಿ ಸುಳ್ಳು ಹೇಳಿರುವುದು ಬಹಿರಂಗವಾಗಿದೆ. 

‘ಮಹಿಳಾ ಕಾನ್‌ಸ್ಟೇಬಲ್‌ನ ಸಹೋದ್ಯೋಗಿಗೆ ಇತ್ತೀಚೆಗೆ ಕೊರೊನಾ ವೈರಸ್‌ ಸೋಂಕು ತಗುಲಿತ್ತು. ಪ್ರಾಥಮಿಕ ಸಂಪರ್ಕದ ಕಾರಣಕ್ಕೆ ಮಹಿಳಾ ಕಾನ್‌ಸ್ಟೇಬಲ್‌ ಅನ್ನು ಕ್ವಾರಂಟೈನ್‌ ಮಾಡಬೇಕಾಗಿ ಬಂದಿತ್ತು,ಈ ವಿಷಯ ಮಹಿಳಾ ಪೇದೆಗೆ ತಿಳಿಸಿದಾಗ ಆಕೆ, ‘ಅಂಚೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನನ್ನ ಪತಿಯನ್ನೂ ನನ್ನೊಂದಿಗೆ ಕ್ವಾರಂಟೈನ್‌ ಮಾಡಬೇಕು,’ ಎಂದು ಅಧಿಕಾರಿಗಳ ಬಳಿ ಹೇಳಿಕೊಂಡಿದ್ದರು. ಹೀಗಾಗಿ ಪೊಲೀಸ್‌ ತರಬೇತಿ ಕೇಂದ್ರದಲ್ಲಿ ಅವರಿಬ್ಬರನ್ನೂ ಕ್ವಾರಂಟೈನ್‌ ಮಾಡಲಾಗಿತ್ತು,’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮಹಿಳಾ ಪೇದೆಯೊಂದಿಗೆ ಕ್ವಾರಂಟೈನ್‌ ಆಗಿದ್ದ ವ್ಯಕ್ತಿಯು ಮೂರು ದಿನಗಳಾದರೂ ಮನೆಗೆ ಹೋಗದ ಹಿನ್ನೆಲೆಯಲ್ಲಿ ಆತನ ನಿಜವಾದ ಪತ್ನಿ ಆತಂಕಕ್ಕೆ ಒಳಗಾಗಿದ್ದಾರೆ. ಕೊನೆಗೆ ತನ್ನ ಪತಿ ಮಹಿಳಾ ಪೇದೆಯೊಬ್ಬರೊಂದಿಗೆ ಕ್ವಾರಂಟೈನ್‌ ಆಗಿರುವ ವಿಚಾರ ತಿಳಿದ ಮಹಿಳೆ, ಪೊಲೀಸ್‌ ತರಬೇತಿ ಕೇಂದ್ರದ ಬಳಿಗೆ ಬಂದಿದ್ದರು. ಆದರೆ, ಭದ್ರತಾ ಸಿಬ್ಬಂದಿ ಆಕೆಯನ್ನು ಒಳಗೆ ಬಿಟ್ಟಿರಲಿಲ್ಲ. ನಂತರ ಅವರು ಪತಿ ವಿರುದ್ಧ ಬಜಾಜ್ ನಗರ ಪೊಲೀಸರಿಗೆ ದೂರು ನೀಡಿದ್ದರು. ಇದೇ ವಿಷಯವಾಗಿ ಪೊಲೀಸ್ ಆಯುಕ್ತ ಡಾ.ಭೂಷಣಕುಮಾರ್ ಉಪಾಧ್ಯಾಯ ಅವರನ್ನೂ ಭೇಟಿಯಾಗಿದ್ದರು. ನಂತರ ಪ್ರಕರಣದ ತನಿಖೆಗೆ ಆದೇಶಿಸಲಾಯಿತು,’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT