ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಭಾರತ್ ಸೇನಾದ ಸದಸ್ಯ ಬಂಧನ 
ದೇಶ

ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಭಾರತ್ ಸೇನಾ ಸದಸ್ಯನ ಬಂಧನ 

ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ ಬಳಿದ ಪ್ರಕಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಕೊಯಂಬತ್ತೂರಿನ ಪೊಡನೂರ್ ಪೊಲೀಸರು ಬಂಧಿಸಿದ್ದಾರೆ.

ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ ಬಳಿದ ಪ್ರಕಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಕೊಯಂಬತ್ತೂರಿನ ಪೊಡನೂರ್ ಪೊಲೀಸರು ಬಂಧಿಸಿದ್ದಾರೆ.

ಭಾರತ ಸೇನಾದ ಸದಸ್ಯ, ಚೆಟ್ಟಿಪಲಯಂ ರಸ್ತೆಯ 21 ವರ್ಷದ ಎಂ ಅರುಣ್ ಕೃಷ್ಣನ್ ಬಂಧಿತ ವ್ಯಕ್ತಿ. "ಅರುಣ್ ಕೃಷ್ಣನ್ ಭಾರತ್ ಸೇನಾದ ಕೊಯಂಬತ್ತೂರಿನ ದಕ್ಷಿಣ ಜಿಲ್ಲಾ ಸಂಘಟಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಡೆಪ್ಯುಟಿ ಕಮಿಷನರ್ ಜಿ ಸ್ಟಾಲಿನ್ ಹೇಳಿದ್ದಾರೆ.

ಸಮಾಜದಲ್ಲಿ ಗಲಭೆ ಉಂಟುಮಾಡುವ ಉದ್ದೇಶ 153 ಸೆಕ್ಷನ್ 153  A, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವ ಆರೋಪದಡಿ ಸೆಕ್ಷನ್ 504 ರ ಅಡಿಯಲ್ಲಿ ಅರುಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಸುಂದರ್ ಪುರಂ ನ ಅಯ್ಯರ್ ಆಸ್ಪತ್ರೆ ಬಸ್ ನಿಲ್ದಾಣದ ಬಳಿ ಇರುವ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ಇದರಿಂದಾಗಿ ಪೆರಿಯಾರ್ ಗೆ ಅವಮಾನವಾಗಿದೆ ಎಂದು ದ್ರಾವಿಡಾರ್ ಕಳಗಂ ಹಾಗೂ ತಂಥಿ ಪೆರಿಯಾರ್ ದ್ರಾವಿಡಾರ್ ಕಳಗಂ ಸಂಘಟನೆಯ ಸದಸ್ಯರು ಆರೋಪಿಸಿ ಈ ಕೃತ್ಯಕ್ಕೆ ಕಾರಣವಾದ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT