ಸಾಂದರ್ಭಿಕ ಚಿತ್ರ 
ದೇಶ

ಪ್ರೀತಿ ಒಲ್ಲೆ ಎಂದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭಗ್ನಪ್ರೇಮಿ!

ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ 20 ವರ್ಷದ ಯುವಕನೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿಗೆ ಇರಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಪೆರೂರು ಬಳಿ ನಡೆದಿದೆ.

ಕೊಯಂಬತ್ತೂರು: ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ 20 ವರ್ಷದ ಯುವಕನೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿಗೆ ಇರಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಪೆರೂರು ಬಳಿ ನಡೆದಿದೆ.

ಕೊಯಂಬತ್ತೂರಿನ ಪೆರೂರು ಬಳಿಯ ಅರುಮುಗಗೌಡನೂರುನಲ್ಲಿ ಶುಕ್ರವಾರ ರಾತ್ರಿ 10-30ರ ವೇಳೆಯಲ್ಲಿ ಈ ಘಟನೆ ನಡೆದಿದೆ.
ಯುವತಿ ಚಿಕಿತ್ಸೆಗೆ ಸ್ಪಂದಿಸದೆ  ಕೊಯಂಬತ್ತೂರಿನ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿರುವುದಾಗಿ ಆಸ್ಪತ್ರೆಯ
ಅಧಿಕೃತ ಮೂಲಗಳು ಸ್ಪಷ್ಪಪಡಿಸಿವೆ. ಹೊಟ್ಟೆಗೆ ಹಲವು ಬಾರಿ ಇರಿತದಿಂದ ಗಾಯಗೊಂಡು ಯುವತಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪೆರೂರಿನ ತವಾತಿರು ಶಾಂತಲಿಂಗ ಅಡಿಗಲರ್ ಕಲಾ, ವಿಜ್ಞಾನ ಮತ್ತು ತಮಿಳು ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಐಶ್ವರ್ಯ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಶಂಕಿತನನ್ನು ಸಿ. ರಾತೀಶ್ ಎನ್ನಲಾಗಿದೆ. ಮೋಟಾರ್ ವಿಂಡಿಂಗ್ ವಾರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಅರುಮುಗಗೌಡನೂರುನ ಎಂಆರ್ ಗಾರ್ಡನ್ ನಿವಾಸಿಯಾಗಿದ್ದಾನೆ.ಆತನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೆಲ ತಿಂಗಳಿನಿಂದ ರಾತೀಶ್ ಪ್ರೀತಿಯಲ್ಲಿ ಬಿದ್ದಿರುವುದು ಯುವತಿಯ ಮನೆಯವರಿಗೆ ಗೊತ್ತಾಗಿ ಆತನೊಂದಿಗೆ ಸಂಬಂಧವನ್ನು 
ಕಡಿದುಕೊಳ್ಳುವಂತೆ ಸೂಚಿಸಿದ್ದಾರೆ. ಕೂಡಲೇ ಆಕೆ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದಾಳೆ. ಇದೇ ಕಾರಣಕ್ಕೆ ಆಕೆಗೆ ಇರಿದು ಆರೋಪಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಐಶ್ವರ್ಯ ಮನೆಗೆ ಹೋದ ಶಂಕಿತ ಸಂಬಂಧವನ್ನು ಮುಂದುವರೆಸುವಂತೆ ಕೇಳಿದ್ದಾನೆ. ಈ ಮಧ್ಯೆ ಐಶ್ವರ್ಯ ತಂದೆ
ಶಕ್ತಿವೇಲು ಶಂಕಿತನಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಶಂಕಿತ ರಾತೀಶ್ , ತಂದೆ ಹಾಗೂ ಮಗಳಿಗೆ ಚಾಕುವಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ. ನಂತರ ಇಬ್ಬರನ್ನು ಕೊಯಂಬತ್ತೂರು ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆ ಇಂದು  ಮೃತಪಟ್ಟಿದ್ದಾಳೆ.

ಈ ಮಧ್ಯೆ ರಾತೀಶ್ ವಿರುದ್ಧ ಪೆರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT