ಭಾರತ-ಚೀನಾ ಗಡಿಭಾಗದಲ್ಲಿ ಸೈನಿಕ ಕಾವಲು ಕಾಯುತ್ತಿರುವ ಸಾಂದರ್ಭಿಕ ಚಿತ್ರ 
ದೇಶ

ಗಡಿಯಲ್ಲಿ ಸೇನಾ ಹಿಂತೆಗೆತ ಒಪ್ಪಂದ ಪಾಲಿಸದೇ ಭಾರತದ ಕೆಂಗಣ್ಣಿಗೆ ಗುರಿಯಾದ ಪಿಎಲ್ಎ ಸಿಬ್ಬಂದಿಗಳು! 

ಈಶಾನ್ಯ ಲಡಾಖ್ ನಲ್ಲಿ ಘರ್ಷಣೆಗೆ ಕಾರಣವಾಗಿದ್ದ ಪ್ರದೇಶದಿಂದ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುವುದಕ್ಕೆ ಭಾರತ-ಚೀನಾ ಮಾತುಕತೆ ವೇಳೆ ಪರಸ್ಪರ ಒಪ್ಪಿಗೆ ಸೂಚಿಸಿದ್ದವು. ಆದರೆ ಚೀನಾ ಮಾತ್ರ ಮಾತುಕತೆಯ ಒಪ್ಪಂದವನ್ನು ಪಾಲಿಸದೇ ಮೊಂಡಾಟ ಪ್ರಾರಂಭಿಸಿದೆ.

ನವದೆಹಲಿ: ಈಶಾನ್ಯ ಲಡಾಖ್ ನಲ್ಲಿ ಘರ್ಷಣೆಗೆ ಕಾರಣವಾಗಿದ್ದ ಪ್ರದೇಶದಿಂದ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುವುದಕ್ಕೆ ಭಾರತ-ಚೀನಾ ಮಾತುಕತೆ ವೇಳೆ ಪರಸ್ಪರ ಒಪ್ಪಿಗೆ ಸೂಚಿಸಿದ್ದವು. ಆದರೆ ಚೀನಾ ಮಾತ್ರ ಮಾತುಕತೆಯ ಒಪ್ಪಂದವನ್ನು ಪಾಲಿಸದೇ ಮೊಂಡಾಟ ಪ್ರಾರಂಭಿಸಿದೆ.

ಎಲ್ಎಸಿಯಿಂದ ಚೀನಾ ಸಿಬ್ಬಂದಿಗಳು ವಾಪಸ್ ಆಗಿಲ್ಲ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಪಿಎಲ್ಎ ಸೇನಾ ಸಿಬ್ಬಂದಿಗಳು ಮಾತುಕತೆಗೆ ಬದ್ಧವಾಗಿರದೇ ಇರುವುದನ್ನು ಗಮನಿಸಿರುವ ಭಾರತ, ಸಿಬ್ಬಂದಿಗಳ ಹಿಂತೆಗೆತ ಪ್ರಕ್ರಿಯೆ ಸಂಕೀರ್ಣವಾದದ್ದಾಗಿದ್ದು, ನಿರಂತರ ಪರಿಶೀಲನೆ ಅಗತ್ಯವಿದೆ ಎಂಬ ನಿರ್ಧಾರಕ್ಕೆ ಭಾರತ ಬಂದಿದೆ.

ಚೀನಾ ಸಿಬ್ಬಂದಿಗಳು ಒಂದಷ್ಟು ದೂರ ವಾಪಸ್ ಹೋದಂತೆ ಮಾಡಿ, ಮತ್ತೆ ವಾಪಸ್ಸಾಗುತ್ತಾರೆ. ಆದ್ದರಿಂದ ಈ ಭಾಗದಲ್ಲಿ ಸಭೆ ನಡೆಯುವಾಗ ನಿರಂತರ ಪರಿಶೀಲನೆಯ ಅಗತ್ಯವಿದೆ ಎಂದು ಸೇನೆ ಅಭಿಪ್ರಾಯಪಟ್ಟಿರುವುದನ್ನು ಐಎಎನ್ಎಸ್ ವರದಿ ಮಾಡಿದೆ.

ಚೀನಾ ಸಿಬ್ಬಂದಿಗಳು ಪ್ಯಾಂಗಾಂಗ್ ಲೇಕ್ ನಲ್ಲಿ 2 ಕಿ.ಮೀ ಹಿಂದೆ ಸರಿದಿದ್ದರೆ ಫಿಂಗರ್ 4 ನ್ನು ಸಂಪೂರ್ಣವಾಗಿ ತೊರೆದಿದ್ದಾರೆ. ಆದರೆ ಚೀನಾದ ಸೇನಾ ಸಿಬ್ಬಂದಿಗಳ ಪೈಕಿ ರಿಡ್ಜ್ ಲೈನ್ ನಲ್ಲಿ ಇನ್ನೂ ಕೆಲವರಿದ್ದಾರೆ. ಈ ಬೆಳವಣಿಗೆ ಭಾರತದ ನಿಯಂತ್ರಣದಲ್ಲೇ ಇರುವ ಫಿಂಗರ್ 4 ನಲ್ಲಿ ಚೀನಾ ಕ್ಯಾಂಪ್ ಮಾಡಿತ್ತು ಎಂಬುದನ್ನು ಸ್ಪಷ್ಟಪಡಿಸುತ್ತದೆ.

ಹಾಟ್ ಸ್ಪ್ರಿಂಗ್ಸ್ ಭಾಗದಲ್ಲಿ ಉಭಯ ಸೇನೆಗಳ ನಡುವೆ 600-800 ಮೀಟರ್ ಗಳಷ್ಟು ಅಂತರವಿದ್ದು, ಮಾತುಕತೆಯ ವೇಳೆ ಹಿಂದೆ ಹೋಗಲು ಒಪ್ಪಿಕೊಂಡಿದ್ದ ಚೀನಾ ಸೇನೆ ಮತ್ತೆ ವಾಪಸ್ಸಾಗಿದೆ ಎಂದು ತಿಳಿದುಬಂದಿದೆ.

ಜು.18 ರಂದು ಲಡಾಖ್ ಗೆ ಭೇಟಿ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಮಾತನಾಡುತ್ತಾ, ಭಾರತ ಶಾಂತಿ ಬಯಸುತ್ತದೆ, ಆದರೆ ಚೀನಾದೊಂದಿಗಿನ ಮಾತುಕತೆಯ ಅಂತಿಮ ಫಲಿತಾಂಶ ಏನಾಗುತ್ತೆ ಎಂಬ ಬಗ್ಗೆ ಯಾವುದೇ ಖಾತ್ರಿ ಇಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT