ಭಾರತ-ಚೀನಾ ಗಡಿಭಾಗದಲ್ಲಿ ಸೈನಿಕ ಕಾವಲು ಕಾಯುತ್ತಿರುವ ಸಾಂದರ್ಭಿಕ ಚಿತ್ರ 
ದೇಶ

ಗಡಿಯಲ್ಲಿ ಸೇನಾ ಹಿಂತೆಗೆತ ಒಪ್ಪಂದ ಪಾಲಿಸದೇ ಭಾರತದ ಕೆಂಗಣ್ಣಿಗೆ ಗುರಿಯಾದ ಪಿಎಲ್ಎ ಸಿಬ್ಬಂದಿಗಳು! 

ಈಶಾನ್ಯ ಲಡಾಖ್ ನಲ್ಲಿ ಘರ್ಷಣೆಗೆ ಕಾರಣವಾಗಿದ್ದ ಪ್ರದೇಶದಿಂದ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುವುದಕ್ಕೆ ಭಾರತ-ಚೀನಾ ಮಾತುಕತೆ ವೇಳೆ ಪರಸ್ಪರ ಒಪ್ಪಿಗೆ ಸೂಚಿಸಿದ್ದವು. ಆದರೆ ಚೀನಾ ಮಾತ್ರ ಮಾತುಕತೆಯ ಒಪ್ಪಂದವನ್ನು ಪಾಲಿಸದೇ ಮೊಂಡಾಟ ಪ್ರಾರಂಭಿಸಿದೆ.

ನವದೆಹಲಿ: ಈಶಾನ್ಯ ಲಡಾಖ್ ನಲ್ಲಿ ಘರ್ಷಣೆಗೆ ಕಾರಣವಾಗಿದ್ದ ಪ್ರದೇಶದಿಂದ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುವುದಕ್ಕೆ ಭಾರತ-ಚೀನಾ ಮಾತುಕತೆ ವೇಳೆ ಪರಸ್ಪರ ಒಪ್ಪಿಗೆ ಸೂಚಿಸಿದ್ದವು. ಆದರೆ ಚೀನಾ ಮಾತ್ರ ಮಾತುಕತೆಯ ಒಪ್ಪಂದವನ್ನು ಪಾಲಿಸದೇ ಮೊಂಡಾಟ ಪ್ರಾರಂಭಿಸಿದೆ.

ಎಲ್ಎಸಿಯಿಂದ ಚೀನಾ ಸಿಬ್ಬಂದಿಗಳು ವಾಪಸ್ ಆಗಿಲ್ಲ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಪಿಎಲ್ಎ ಸೇನಾ ಸಿಬ್ಬಂದಿಗಳು ಮಾತುಕತೆಗೆ ಬದ್ಧವಾಗಿರದೇ ಇರುವುದನ್ನು ಗಮನಿಸಿರುವ ಭಾರತ, ಸಿಬ್ಬಂದಿಗಳ ಹಿಂತೆಗೆತ ಪ್ರಕ್ರಿಯೆ ಸಂಕೀರ್ಣವಾದದ್ದಾಗಿದ್ದು, ನಿರಂತರ ಪರಿಶೀಲನೆ ಅಗತ್ಯವಿದೆ ಎಂಬ ನಿರ್ಧಾರಕ್ಕೆ ಭಾರತ ಬಂದಿದೆ.

ಚೀನಾ ಸಿಬ್ಬಂದಿಗಳು ಒಂದಷ್ಟು ದೂರ ವಾಪಸ್ ಹೋದಂತೆ ಮಾಡಿ, ಮತ್ತೆ ವಾಪಸ್ಸಾಗುತ್ತಾರೆ. ಆದ್ದರಿಂದ ಈ ಭಾಗದಲ್ಲಿ ಸಭೆ ನಡೆಯುವಾಗ ನಿರಂತರ ಪರಿಶೀಲನೆಯ ಅಗತ್ಯವಿದೆ ಎಂದು ಸೇನೆ ಅಭಿಪ್ರಾಯಪಟ್ಟಿರುವುದನ್ನು ಐಎಎನ್ಎಸ್ ವರದಿ ಮಾಡಿದೆ.

ಚೀನಾ ಸಿಬ್ಬಂದಿಗಳು ಪ್ಯಾಂಗಾಂಗ್ ಲೇಕ್ ನಲ್ಲಿ 2 ಕಿ.ಮೀ ಹಿಂದೆ ಸರಿದಿದ್ದರೆ ಫಿಂಗರ್ 4 ನ್ನು ಸಂಪೂರ್ಣವಾಗಿ ತೊರೆದಿದ್ದಾರೆ. ಆದರೆ ಚೀನಾದ ಸೇನಾ ಸಿಬ್ಬಂದಿಗಳ ಪೈಕಿ ರಿಡ್ಜ್ ಲೈನ್ ನಲ್ಲಿ ಇನ್ನೂ ಕೆಲವರಿದ್ದಾರೆ. ಈ ಬೆಳವಣಿಗೆ ಭಾರತದ ನಿಯಂತ್ರಣದಲ್ಲೇ ಇರುವ ಫಿಂಗರ್ 4 ನಲ್ಲಿ ಚೀನಾ ಕ್ಯಾಂಪ್ ಮಾಡಿತ್ತು ಎಂಬುದನ್ನು ಸ್ಪಷ್ಟಪಡಿಸುತ್ತದೆ.

ಹಾಟ್ ಸ್ಪ್ರಿಂಗ್ಸ್ ಭಾಗದಲ್ಲಿ ಉಭಯ ಸೇನೆಗಳ ನಡುವೆ 600-800 ಮೀಟರ್ ಗಳಷ್ಟು ಅಂತರವಿದ್ದು, ಮಾತುಕತೆಯ ವೇಳೆ ಹಿಂದೆ ಹೋಗಲು ಒಪ್ಪಿಕೊಂಡಿದ್ದ ಚೀನಾ ಸೇನೆ ಮತ್ತೆ ವಾಪಸ್ಸಾಗಿದೆ ಎಂದು ತಿಳಿದುಬಂದಿದೆ.

ಜು.18 ರಂದು ಲಡಾಖ್ ಗೆ ಭೇಟಿ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಮಾತನಾಡುತ್ತಾ, ಭಾರತ ಶಾಂತಿ ಬಯಸುತ್ತದೆ, ಆದರೆ ಚೀನಾದೊಂದಿಗಿನ ಮಾತುಕತೆಯ ಅಂತಿಮ ಫಲಿತಾಂಶ ಏನಾಗುತ್ತೆ ಎಂಬ ಬಗ್ಗೆ ಯಾವುದೇ ಖಾತ್ರಿ ಇಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video