ಶರದ್ ಪವಾರ್ 
ದೇಶ

ಮೋದಿ ಅಯೋಧ್ಯೆ ಭೇಟಿ: ಮಂದಿರ ಕಟ್ಟಿದರೆ ಕೊರೋನಾ ನಿರ್ಮೂಲನೆಯಾಗುತ್ತೆಂದು ಕೆಲವರು ಭಾವಿಸಿದ್ದಾರೆ- ಶರದ್ ಪವಾರ್ ಲೇವಡಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದರೆ ದೇಶದಲ್ಲಿ ಕೊರೋನಾ ನಿರ್ಮೂಲನೆಯಾಗುತ್ತದೆಯೆಂದು ಕೆಲವರು ಭಾವಿಸಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಲೇವಡಿ ಮಾಡಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದರೆ ದೇಶದಲ್ಲಿ ಕೊರೋನಾ ನಿರ್ಮೂಲನೆಯಾಗುತ್ತದೆಯೆಂದು ಕೆಲವರು ಭಾವಿಸಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಲೇವಡಿ ಮಾಡಿದ್ದಾರೆ. 

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿನ್ನೆ ಆಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಬಹುದು ಎಂದು ಹೇಳಿದ ಬೆನ್ನಲ್ಲೇ ಶರದ್ ಪವಾರ್ ಈ ಹೇಳಿಕೆ ನೀಡಿದ್ದಾರೆ. ಟ್ರಸ್ಟ್ ರಾಮಮಂದಿರದ ಶಂಕುಸ್ಥಾಪನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದೆ. 

ರಾಮಮಂದಿರ ನಿರ್ಮಾಣದ ಕುರಿತಾಗಿ ಮಿತ್ರ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ ಬೆನ್ನಲ್ಲೇ ಶಿವಸೇನೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದೆ. ಶ್ರೀರಾಮ ನಮ್ಮ ಪಕ್ಷದ ನಂಬಿಕೆಯ ವಿಷಯ. ಇದನ್ನು ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಲು ಇಚ್ಛಿಸುವುದಿಲ್ಲ. ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹಾರಾಷ್ಟ್ರ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ ಎಂದು ದಕ್ಷಿಣ ಮುಂಬೈನ ಶಿವಸೇನಾ ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT