ಸತ್ಯೇಂದ್ರ ಜೈನ್ 
ದೇಶ

ಕೊರೋನಾದಿಂದ ಚೇತರಿಸಿಕೊಂಡು ಕರ್ತವ್ಯಕ್ಕೆ ಹಾಜರಾದ ಸತ್ಯೇಂದ್ರ ಜೈನ್

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿದ್ದ ಸಮಯದಲ್ಲಿ ನಿರಂತರ ಕೆಲಸದಲ್ಲಿ ತೊಡಗಿದ್ದ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದರು. ಆರೋಗ್ಯಾಧಿಕಾರಿಗಳು ಮತ್ತು ವೈದ್ಯರ ಜೊತೆಗೆ ಕಾಲಕಾಲಕ್ಕೆ ಸಭೆಗಳನ್ನು ನಡೆಸುತ್ತಿದ್ದರು. 

ಕೊವಿಡ್ ಕೇರ್ ಸೆಂಟರ್ ಗಳಿಗೂ ಭೇಟಿ ನೀಡಿದ್ದ ಸತ್ಯೇಂದರ್ ಜೈನ್, ಸೋಂಕಿತರಿಗೆ ನೀಡುತ್ತಿದ್ದ ಚಿಕಿತ್ಸಾ ವಿಧಾನದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಆರೋಗ್ಯ ಸಚಿವರಿಗೆ ಕೊರೊನಾ ಸೋಂಕು ತಗಲಿತ್ತು. ಆರೋಗ್ಯದಲ್ಲಿ ಚೇತರಿಸಿಕೊಂಡ ನಂತರ ಕರ್ತವ್ಯಕ್ಕೆ ಹಾಜರಾಗುತ್ತಿರುವ ಸಚಿವರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟರ್ ನಲ್ಲಿ ಸ್ವಾಗತ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT