ತಬ್ಲಿಘಿ ಜಮಾತ್ (ಸಂಗ್ರಹ ಚಿತ್ರ) 
ದೇಶ

121 ವಿದೇಶಿ ತಬ್ಲಿಘಿಗಳಿಗೆ ತವರಿಗೆ ಮರಳಲು ಕೋರ್ಟ್ ಅನುಮತಿ

ಬಾಂಗ್ಲಾದೇಶದ 79 ತಬ್ಲಿಘಿಗಳು, ಕಿರ್ಗಿಜ್ ನ 42 ತಬ್ಲಿಘಿಗಳನ್ನು ಮರಳಿ ಅವರ ದೇಶಕ್ಕೆ ಹೋಗುವುದಕ್ಕೆ ದೆಹಲಿ ಕೋರ್ಟ್ ಜು.20 ರಂದು ಆದೇಶ ನೀಡಿದೆ.

ನವದೆಹಲಿ: ಬಾಂಗ್ಲಾದೇಶದ 79 ತಬ್ಲಿಘಿಗಳು, ಕಿರ್ಗಿಜ್ ನ 42 ತಬ್ಲಿಘಿಗಳನ್ನು ಮರಳಿ ಅವರ ದೇಶಕ್ಕೆ ಹೋಗುವುದಕ್ಕೆ ದೆಹಲಿ ಕೋರ್ಟ್ ಜು.20 ರಂದು ಆದೇಶ ನೀಡಿದೆ.

ಕೋವಿಡ್-19 ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಚ್ ನಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಲೆಕ್ಕಿಸದೇ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಜಗತ್ತಿನ ವಿವಿಧ ದೇಶಗಳಿಂದ ತಬ್ಲಿಘಿ ಜಮಾತ್ ಸದಸ್ಯರು ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ವೀಸಾ ನಿಯಮ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಲಾಗಿತ್ತು.

ಇತ್ತೀಚೆಗೆ ತಬ್ಲಿಘಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡು ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವುದಕ್ಕಾಗಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರಿಂದ ನ್ಯಾಯಾಲಯ ದಂಡ ವಿಧಿಸಿ ತಬ್ಲಿಘಿಗಳನ್ನು ವಾಪಸ್ ತಮ್ಮ ದೇಶಗಳಿಗೆ ತೆರಳಲು ಅನುಮತಿ ನೀಡಿದೆ.

121 ತಬ್ಲಿಘಿಗಳಿಗೆ ತಲಾ 5,00 ರೂಪಾಯಿ ದಂಡ ವಿಧಿಸಿರುವ ನ್ಯಾಯಾಲಯ ಬಿಡುಗಡೆಗೆ ಆದೇಶಿಸಿದೆ. ಆದರೆ ಮೂವರು ಬಾಂಗ್ಲಾದೇಶದ ತಬ್ಲಿಘಿಗಳು ಹಾಗೂ ಕಿರ್ಗಿಜ್ ನ 8 ತಬ್ಲಿಘಿಗಳು ನ್ಯಾಯಾಲಯ ನೀಡಿರುವ ಆದೇಶವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT