ಗಾಂಜಾ 
ದೇಶ

ಬಾಳೆಹಣ್ಣಿನ ಗೊನೆಗಳ ನಡುವೆ ಸಾಗಿಸುತ್ತಿದ್ದ 20 ಲಕ್ಷ ರೂ. ಮೌಲ್ಯದ 108 ಕೆಜಿ ಗಾಂಜಾ ಪತ್ತೆ

ಜುಲೈ 21 ರ ಮಂಗಳವಾರ ಪಿಕ್ ಅಪ್ ಟ್ರಕ್‌ನಲ್ಲಿ ತುಂಬಿದ ಬಾಳೆಹಣ್ಣಿನ ಗೊನೆಗಳ ನಡುವೆ  ಅಡಗಿಸಿಟ್ಟಿದ್ದ ಒಂದು ಕ್ವಿಂಟಾಲ್ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಕಾಸರಗೋಡು ಜಿಲ್ಲೆ ಮಂಜೇಶ್ವರ ಠಾಣೆ  ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.  ಆದರೆ ಆರೋಪಿಗಳು ಪೋಲೀಸರ ಕೈಗೆ ಸಿಕ್ಕದೆ ಪರಾರಿಯಾಗಿದ್ದಾರೆ.

ಕಾಸರಗೋಡು: ಜುಲೈ 21 ರ ಮಂಗಳವಾರ ಪಿಕ್ ಅಪ್ ಟ್ರಕ್‌ನಲ್ಲಿ ತುಂಬಿದ ಬಾಳೆಹಣ್ಣಿನ ಗೊನೆಗಳ ನಡುವೆ  ಅಡಗಿಸಿಟ್ಟಿದ್ದ ಒಂದು ಕ್ವಿಂಟಾಲ್ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಕಾಸರಗೋಡು ಜಿಲ್ಲೆ ಮಂಜೇಶ್ವರ ಠಾಣೆ  ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.  ಆದರೆ ಆರೋಪಿಗಳು ಪೋಲೀಸರ ಕೈಗೆ ಸಿಕ್ಕದೆ ಪರಾರಿಯಾಗಿದ್ದಾರೆ.

ವಿಶ್ವಾಸಾರ್ಹ ಮೂಲಗಳಿಂದ ಬಂದ ಮಾಹಿತಿ ಆಧರಿಸಿ  ಪೊಲೀಸರು ಮಂಗಳವಾರ ಸಂಜೆ ಈ ಕಾರ್ಯಾಚರಣೆಯನ್ನು ನಡೆಸಿದ್ದು  ಪೊಲೀಸರು ಮಂಜೇಶ್ವರ ಕುಂಜತ್ತ್ರ್‍ ಪಡವಿನಲ್ಲಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ, ಆ ಮಾರ್ಗದಲ್ಲಿ ಬಂದ ಪಿಕ್-ಅಪ್ ಟ್ರಕ್ ಒಂದರಲ್ಲಿ ಕ್ವಿಂಟಾಲ್ ತೂಕದ ಗಾಂಜಾ ಪತ್ತೆಯಾಗಿದೆ.

ಟ್ರಕ್ ಪೋಲೀಸರ ಪರಿಶೀಲನೆಗೆ ಸಿಕ್ಕದೆ ಮುಂದೆ ವೇಗವಾಗಿ ಚಲಿಸುವಾಗ ವಾಹನವನ್ನು ಬೆನ್ನಟ್ಟಿದ ಪೊಲೀಸರು ವಾಹನ ಅಡ್ಡಗಟ್ಟುವಲ್ಲಿ ಯಶಸ್ವಿಯಾದರು. ಆದರೆ ಪೊಲೀಸರ ಕಣ್ತಪ್ಪಿಸಿ ಆರೋಪಿಗಳು ಪರಾರಿಯಾಗಿದ್ದಾರೆ. ವಾಹನವನ್ನು  ಕೂಲಂಕಷವಾಗಿ ಪರಿಶೀಲನೆ ನಡೆಸಿದ ಪೊಲೀಸರು 108 ಕೆಜಿ ಗಾಂಜಾವನ್ನು ಸ್ಯಾಚೆಟ್‌ಗಳಲ್ಲಿ ತುಂಬಿರುವುದನ್ನು ಕಂಡುಕೊಂಡರು. ಪೊಲೀಸರು ಈಗ ಆರೋಪಿಗಳ ಶೋಧದಲ್ಲಿ ತೊಡಗಿದ್ದು ಪ್ರಶ್ನಾರ್ಹ ವಾಹನವು ಕರ್ನಾಟಕ ನೋಂದಣಿ ಸಂಖ್ಯೆಯನ್ನು ಹೊಂದಿದೆ, ಮತ್ತು ಆ ಸಂಖ್ಯೆ ನಕಲಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ಗಂಜಾದ ಮಾರುಕಟ್ಟೆ ಮೌಲ್ಯ ಅಂದಾಜು 20 ಲಕ್ಷ ರೂ. ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT