ಅಶೋಕ್ ಗೆಹ್ಲೋಟ್-ಸಚಿನ್ ಪೈಲಟ್ 
ದೇಶ

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ಅಂಗಳದಲ್ಲಿ ಚೆಂಡು!

ರಾಜಸ್ತಾನದಲ್ಲಿ ರಾಜಕೀಯ ಅತಂತ್ರ ಹಿನ್ನೆಲೆಯಲ್ಲಿ ಸಚಿನ್ ಪೈಲಟ್ ಮತ್ತು ಇತರ 18 ಕಾಂಗ್ರೆಸ್ ಶಾಸಕರ ಅನರ್ಹತೆ ಪ್ರಕ್ರಿಯೆಯನ್ನು ತಡೆ ಹಿಡಿಯುವಂತೆ ಹೈಕೋರ್ಟ್ ನಿರ್ದೇಶನ ನೀಡಿರುವುದನ್ನು ಪ್ರಶ್ನಿಸಿ ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. 

ನವದೆಹಲಿ: ರಾಜಸ್ತಾನದಲ್ಲಿ ರಾಜಕೀಯ ಅತಂತ್ರ ಹಿನ್ನೆಲೆಯಲ್ಲಿ ಸಚಿನ್ ಪೈಲಟ್ ಮತ್ತು ಇತರ 18 ಕಾಂಗ್ರೆಸ್ ಶಾಸಕರ ಅನರ್ಹತೆ ಪ್ರಕ್ರಿಯೆಯನ್ನು ತಡೆ ಹಿಡಿಯುವಂತೆ ಹೈಕೋರ್ಟ್ ನಿರ್ದೇಶನ ನೀಡಿರುವುದನ್ನು ಪ್ರಶ್ನಿಸಿ ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. 

ರಾಜಸ್ತಾನ ಹೈಕೋರ್ಟ್ ನಿರ್ದೇಶನ ಶಾಸಕಾಂಗದ ಅಧಿಕಾರಕ್ಕೆ ಮಾಡಿದ ನೇರ ಅವಮಾನ ಎಂದು ಸ್ಪೀಕರ್ ತಮ್ಮ ಅರ್ಜಿಯಲ್ಲಿ ಹೇಳಲಾಗಿದೆ. ಪಕ್ಷಾಂತರ ನಿಷೇದ ಪ್ರಕಾರ ಕ್ರಮಕೈಗೊಳ್ಳುವುದನ್ನು ತಡೆಯುವಂತೆ ಹೈಕೋರ್ಟ್ ನೀಡಿದ ಆದೇಶವು ತಪ್ಪು. ಸಾಂವಿಧಾನಿಕ ಕೆಲಸಕ್ಕೆ ಯಾರು ಅಡ್ಡಿ ಮಾಡದಂತೆ ಸುಪ್ರೀಂ ಕೋರ್ಟ್ ನೋಡಿಕೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. 

ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ವಿವೇಕ್ ತಂಕಾ ಅವರು ಸ್ಪೀಕರ್ ಸಿಪಿ ಜೋಶಿ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರ ಪೀಠವನ್ನು ಸಿಬಲ್ ವಿನಂತಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ