ಸ್ವರೂಪಾನಂದ ಸರಸ್ವತಿ 
ದೇಶ

ಅಶುಭ ಘಳಿಗೆ: ರಾಮಮಂದಿರ ನಿರ್ಮಾಣ ಪ್ರಾರಂಭಕ್ಕೆ ಇದು ಸಮಯವಲ್ಲ - ಶಂಕರಾಚಾರ್ಯ ಸ್ವರೂಪನಂದ್ ಸರಸ್ವತಿ

ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಿಲಾನ್ಯಾಸ ಸಮಾರಂಭ ನಡೆಯಲಿದ್ದು ಇದನ್ನು ಶಂಕರಾಚಾರ್ಯ ಸ್ವರೂಪಾನಂದ್ ಸರಸ್ವತಿಯವರು ವಿರೋಧಿಸಿದ್ದು ರಾಮ ದೇವಾಲಯದ ನಿರ್ಮಾಣ ಕಾರ್ಯಗಳು ಸರಿಯಾದ ಸಮಯದಲ್ಲಿ ಪ್ರಾರಂಭವಾಗಬೇಕು ಎಂದು ಹೇಳಿದ್ದಾರೆ.

ನವದೆಹಲಿ: ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಿಲಾನ್ಯಾಸ ಸಮಾರಂಭ ನಡೆಯಲಿದ್ದು ಇದನ್ನು ಶಂಕರಾಚಾರ್ಯ ಸ್ವರೂಪಾನಂದ್ ಸರಸ್ವತಿಯವರು ವಿರೋಧಿಸಿದ್ದು ರಾಮ ದೇವಾಲಯದ ನಿರ್ಮಾಣ ಕಾರ್ಯಗಳು ಸರಿಯಾದ ಸಮಯದಲ್ಲಿ ಪ್ರಾರಂಭವಾಗಬೇಕು ಎಂದು ಹೇಳಿದ್ದಾರೆ. 

“ನಾವು ಯಾವುದೇ ಸ್ಥಾನವನ್ನು ಬಯಸುವುದಿಲ್ಲ ಅಥವಾ ರಾಮಮಂದಿರದ ಟ್ರಸ್ಟಿಯಾಗಲು ಬಯಸುವುದಿಲ್ಲ. ಆದರೆ ದೇವಾಲಯವನ್ನು ಸರಿಯಾದ ಸಮಯದಲ್ಲಿ ನಿರ್ಮಿಸಬೇಕು ಮತ್ತು ಸರಿಯಾದ ಸಮಯದಲ್ಲಿ ಅಡಿಪಾಯ ಹಾಕಬೇಕು ಎಂದು ನಾವು ಬಯಸುತ್ತೇವೆ.

ಇದನ್ನು ಅಶುಭ ಘಳಿಗೆ ಎಂದು ಕರೆಯಲು ಶಂಕರಾಚಾರ್ಯರು ಯಾವುದೇ ನಿರ್ದಿಷ್ಟ ಕಾರಣವನ್ನು ನೀಡದಿದ್ದರೂ, ಅವರು ಮಹಾಮಾರಿ ಕೊರೋನಾವೈರಸ್ ಅನ್ನು ಉಲ್ಲೇಖಿಸುತ್ತಿರಬಹುದು.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮಮಂದಿರ ನಿರ್ಮಾಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆಗಳು ನಡೆಯುತ್ತಿರುವಾಗಲೂ ಶಂಕರಾಚಾರ್ಯರು ಈ ಹೇಳಿಕೆಯನ್ನು ನೀಡಿದ್ದಾರೆ. 

"ನಾವು ಶ್ರೀರಾಮನ ಪರಮ ಭಕ್ತರು, ಯಾರಾದರೂ ರಾಮಮಂದಿರವನ್ನು ನಿರ್ಮಿಸಿದರೂ ನಾವು ಸಂತೋಷಪಡುತ್ತೇವೆ. ಆದರೆ ಅದಕ್ಕಾಗಿ ಸೂಕ್ತ ದಿನಾಂಕ ಮತ್ತು ಶುಭ ಸಮಯವನ್ನು ಆರಿಸಬೇಕು. ಇದರಲ್ಲಿ ರಾಜಕೀಯ ಇರಬಾರದು. ಸಾರ್ವಜನಿಕರ ಹಣದಿಂದ ದೇವಾಲಯವನ್ನು ನಿರ್ಮಿಸಲಾಗುತ್ತಿದೆ ಅವರ ಅಭಿಪ್ರಾಯವನ್ನೂ ಸಹ ಪಡೆಯಬೇಕು ಎಂದು ಶಂಕರಾಚಾರ್ಯ ಸರಸ್ವತಿ ಹೇಳಿದ್ದಾರೆ.

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!