ವಿಜಯ್ ಮಲ್ಯ 
ದೇಶ

ವಿಜಯ್ ಮಲ್ಯ ಹಸ್ತಾಂತರದ ನಿಖರ ಸಮಯ ಹೇಳಲು ಸಾಧ್ಯವಿಲ್ಲ: ಯುಕೆ ರಾಯಭಾರಿ

ದೇಶಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಲು  ಯುಕೆ ಸರ್ಕಾರವು ಸಮಯವನ್ನು ನಿಗದಿಪಡಿಸಲು ಸಾಧ್ಯವಿಲ್ಲ, ಆದರೆ ಅಪರಾಧಿಗಳು ರಾಷ್ಟ್ರದ ಗಡಿ ದಾಟಿ ಹೋಗುವ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲಲು ಸಹ ಸಾಧ್ಯವಾಗುವುದಿಲ್ಲ ಎಂದು  ಬ್ರಿಟಿಷ್ ಹೈಕಮಿಷನರ್ ಸರ್ ಫಿಲಿಪ್ ಬಾರ್ಟನ್ ಗುರುವಾರ ಹೇಳಿದ್ದಾರೆ.

ನವದೆಹಲಿ: ದೇಶಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಲು  ಯುಕೆ ಸರ್ಕಾರವು ಸಮಯವನ್ನು ನಿಗದಿಪಡಿಸಲು ಸಾಧ್ಯವಿಲ್ಲ, ಆದರೆ ಅಪರಾಧಿಗಳು ರಾಷ್ಟ್ರದ ಗಡಿ ದಾಟಿ ಹೋಗುವ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲಲು ಸಹ ಸಾಧ್ಯವಾಗುವುದಿಲ್ಲ ಎಂದು  ಬ್ರಿಟಿಷ್ ಹೈಕಮಿಷನರ್ ಸರ್ ಫಿಲಿಪ್ ಬಾರ್ಟನ್ ಗುರುವಾರ ಹೇಳಿದ್ದಾರೆ.

 ಆನ್‌ಲೈನ್ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾರ್ಟನ್ ಅವರಿಗೆ ಮಲ್ಯ ಯುಕೆ ಯಲ್ಲಿ ಆಶ್ರಯ ಕೋರಿದ್ದಾರೆಯೆ? ಎಂದು ಪ್ರಶ್ನಿಸಲಾಗಿ ಅವರು ತನ್ನ ಸರ್ಕಾರವು ಅಂತಹ ವಿಷಯಗಳ ಬಗ್ಗೆ ಎಂದಿಗೂ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

"ಯುಕೆ ಸರ್ಕಾರ ಮತ್ತು ಸರ್ಕಾರದಿಂದ ಸ್ವತಂತ್ರವಾಗಿರುವ ನ್ಯಾಯಾಲಯಗಳು, ಜನರು ಬೇರೆ ದೇಶಕ್ಕೆ ಹೋಗುವುದರ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲುವುದನ್ನು ತಡೆಯುವಲ್ಲಿ ತಮ್ಮ ಪಾತ್ರದ ಬಗ್ಗೆ ಸಂಪೂರ್ಣವಾಗಿ ಸ್ಪಷ್ಟ ನಿಲುವನ್ನು ಹೊಂದಿದೆ. . ಯಾವುದೇ ಸಂದರ್ಭದಲ್ಲಿ ನಮ್ಮ ಪಾತ್ರವನ್ನು ವಹಿಸಲು ನಾವೆಲ್ಲರೂ ದೃಢನಿಶ್ಚಯವನ್ನು ಹೊಂದಿದ್ದೇವೆ ರಾಷ್ಟ್ರದ  ಗಡಿಗಳನ್ನು ದಾಟುವ ಮೂಲಕ ಅಪರಾಧಿಗಳು ಶಿಕ್ಷೆಯಿಂದ  ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ" ಅವರು ಹೇಳಿದ್ದಾರೆ.

ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ನಡೆಯುತ್ತಿರುವ ಕಾನೂನು ಪ್ರಕರಣದಲ್ಲಿ ಯುಕೆ ಯಾವ ಹೊಸ ಬದಲಾವಣೆ ಹೊಂದಿಲ್ಲ ಎಂದು ಅವರು ಹೇಳಿದರು."ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವುದಕ್ಕಾಗಿ ನಡೆಯುತ್ತಿರುವ ಕಾನೂನು ಪ್ರಕರಣದ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಸಮಯದ ಮಿತಿಯ ಬಗ್ಗೆ  ನಾನು ಏನನ್ನೂ ಹೇಳಲಾರೆ" ಎಂದು ಬಾರ್ಟರ್ ಹೇಳಿದ್ದಾರೆ.  ಅದೇ ಸಮಯದಲ್ಲಿ, ಹೊಸದಾಗಿ ನೇಮಕಗೊಂಡ ರಾಯಭಾರಿ ಯುಕೆ ಸರ್ಕಾರವು ಈ ಪ್ರಕರಣಕ್ಕೆ ಭಾರತವು ನೀಡುವ ಪ್ರಾಮುಖ್ಯತೆಯನ್ನು ಅರಿತಿದೆ ಎಂದೂ ನುಡಿದರು.

ಮಲ್ಯ ಅವರ ಆಶ್ರಯದ ಮನವಿಯನ್ನು ಯಾವ ಕಾರಣಕ್ಕೂ ಪರಿಗಣಿಸಬಾರದೆಂದು ಯುಕೆ ಸರ್ಕಾರಕ್ಕೆ ಬಾರತ ಒತ್ತಾಯಿಸಿದೆ. ಏಕೆಂದರೆ ದೇಶದಲ್ಲಿ ಅವರಿಗೆ ಕಿರುಕುಳ ನೀಡಲಾಗುತ್ತದೆ ಎನ್ನಲು ಯಾವುದೇ ಆಧಾರವಿಲ್ಲ ಎಂದು ಭಾರತ ತಿಳಿಸಿದೆ.ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆಯಿಲ್ಲ ಎಂದು ಯುಕೆ ಸರ್ಕಾರ ಈ ಹಿಂದೆ ಸೂಚಿಸಿತ್ತು, ಅವರನ್ನು ಹಸ್ತಾಂತರಿಸುವ ಮೊದಲು ಕಾನೂನು ಸಮಸ್ಯೆ ಬಗೆಹರಿಯಬೇಕಿದೆ ಎಂದು ಅದು ಹೇಳಿತ್ತು.

ಮನಿ ಲ್ಯಾಂಡರಿಂಗ್  ಮತ್ತು ವಂಚನೆ ಆರೋಪಗಳನ್ನು ಎದುರಿಸಲು ಭಾರತಕ್ಕೆ ಹಸ್ತಾಂತರವಾಗುವುದನ್ನು ವಿರೋಧಿಸಿ ಮೇ ತಿಂಗಳಲ್ಲಿ ಮಲ್ಯ ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿಗಳು ವಜಾ ಆಗಿದೆ. ಈ ತೀರ್ಪು ಮಲ್ಯ ಪಾಲಿಗೆ ತೀವ್ರ ಹಿನ್ನೆಡೆಯಾಗಿದೆ,  ಮಲ್ಯ 2016 ರ ಮಾರ್ಚ್‌ನಿಂದ ಯುಕೆ ನಲ್ಲಿ ಇದ್ದಾರೆ. ಮೂರು ವರ್ಷಗಳ ಹಿಂದೆ ಸ್ಕಾಟ್‌ಲ್ಯಾಂಡ್ ಯಾರ್ಡ್‌ನಿಂದ ಏಪ್ರಿಲ್ 18, 2017 ರಂದು ಬಂಧಿಸಲ್ಪಟ್ಟ ಮಲ್ಯ ಹಸ್ತಾಂತರ ವಾರಂಟ್‌ನಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT