ಸಾಂದರ್ಭಿಕ ಚಿತ್ರ 
ದೇಶ

ಬಂಡಾಯ ಶಾಸಕರಿಂದ ಅನರ್ಹತೆ ಪ್ರಶ್ನಿಸಿ ಅರ್ಜಿ: ರಾಜಸ್ತಾನ ಹೈಕೋರ್ಟ್ ಗೆ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಅನುಮತಿ

ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಬಂಡಾಯ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ರಾಜಸ್ತಾನ ಹೈಕೋರ್ಟ್ ಆದೇಶ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಬಂಡಾಯ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ರಾಜಸ್ತಾನ ಹೈಕೋರ್ಟ್ ಆದೇಶ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ ಆರ್ ಗವೈ ಮತ್ತು ಕೃಷ್ಣ ಮುರಳಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಶಾಸಕರ ಅನರ್ಹತೆ ಪ್ರಕರಣದಲ್ಲಿ ರಾಜಸ್ತಾನ ಹೈಕೋರ್ಟ್ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿದೆ.

ನಾಳೆ ಹೈಕೋರ್ಟ್ ನ ತೀರ್ಪು ಹೊರಬರಲಿ, ಅದರ ತೀರ್ಪಿನ ಮೇಲೆ ಸರ್ವೋಚ್ಛ ನ್ಯಾಯಾಲಯದ ತೀರ್ಪು ನಿರ್ಧಾರವಾಗುತ್ತದೆ ಎಂದು ಹೇಳಿದೆ.

ಈ ಮೂಲಕ ಸಚಿನ್ ಪೈಲಟ್ ಅವರಿಗೆ ಸುಪ್ರೀಂ ಕೋರ್ಟ್ ನಿಲುವಿನಿಂದ ಇಂದು ವರವಾಗಿದೆ ಎನ್ನಬಹುದು. ನಾಳೆ ರಾಜಸ್ತಾನ ಹೈಕೋರ್ಟ್ ಏನೇ ತೀರ್ಪು ನೀಡಿದರೂ ಸಹ ಅಂತಿಮ ಫಲಿತಾಂಶ ನಂತರ ಸುಪ್ರೀಂ ಕೋರ್ಟ್ ನೀಡುವ ತೀರ್ಪಿನ ಮೇಲೆ ಅವಲಂಬಿತವಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT