ಸಾಂದರ್ಭಿಕ ಚಿತ್ರ 
ದೇಶ

ಚೀನಾ ಉತ್ಪನ್ನಗಳು, ಆಪ್ ಗಳಿಗೆ ನಿಷೇಧ ಆಯ್ತು, ಈಗ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರ್ಬಂಧ!

ಕಳೆದ ತಿಂಗಳು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ 20 ಮಂದಿ ಭಾರತೀಯ ಯೋಧರು ಚೀನಾದ ಸೈನಿಕರಿಂದ ಹುತಾತ್ಮರಾದ ನಂತರ ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ ಭಾರತದಲ್ಲಿ ಚೀನಾ ಹೂಡಿಕೆಗೆ ನಿರ್ಬಂಧ ವಿಧಿಸಲಾರಂಭಿಸಿತು. ಚೀನಾ ದೇಶದ 59 ಆಪ್ ಗಳನ್ನು ನಿಷೇಧಿಸಿತು.

ನವದೆಹಲಿ: ಕಳೆದ ತಿಂಗಳು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ 20 ಮಂದಿ ಭಾರತೀಯ ಯೋಧರು ಚೀನಾದ ಸೈನಿಕರಿಂದ ಹುತಾತ್ಮರಾದ ನಂತರ ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ ಭಾರತದಲ್ಲಿ ಚೀನಾ ಹೂಡಿಕೆಗೆ ನಿರ್ಬಂಧ ವಿಧಿಸಲಾರಂಭಿಸಿತು. ಚೀನಾ ದೇಶದ 59 ಆಪ್ ಗಳನ್ನು ನಿಷೇಧಿಸಿತು.

ಇದೀಗ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಚೀನಾ ಸೇರಿದಂತೆ ಭಾರತದ ಗಡಿಯನ್ನು ಹಂಚಿಕೊಂಡಿರುವ ದೇಶಗಳ ಕಂಪೆನಿಗಳು ನಮ್ಮ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಲು ಹೊಸ ರಾಜಕೀಯ ಅನುಮತಿ ಪಡೆಯಬೇಕೆಂಬ ನಿರ್ಬಂಧ ವಿಧಿಸಿದೆ. ಈ ಕುರಿತು ಕಳೆದ ರಾತ್ರಿ ಹಣಕಾಸು ಸಚಿವಾಲಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಚೀನಾ ದೇಶವನ್ನು ಸರ್ಕಾರದ ಸಂಗ್ರಹಣೆಯಲ್ಲಿ ಅಥವಾ ಇಂಧನ, ರೈಲು ಮತ್ತು ಟೆಲಿಕಾಂ ಯೋಜನೆಗಳಲ್ಲಿ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ತಡೆಯಲು ಭಾರತ ಸರ್ಕಾರ ಈ ಕ್ರಮ ಕೈಗೊಂಡಿದ್ದು ಸ್ಪರ್ಧಾತ್ಮಕ ಪ್ರಾಧಿಕಾರಗಳಲ್ಲಿ ದಾಖಲಾತಿ ಮಾಡಿಕೊಂಡಿರುವ ಗಡಿ ದೇಶಗಳ ಕಂಪೆನಿಗಳು ಮಾತ್ರ ಬಿಡ್ಡಿಂಗ್ ನಲ್ಲಿ ಭಾಗವಹಿಸಬಹುದು ಎಂದು ಹೇಳಿದೆ.

ಬಿಡ್ಡಿಂಗ್ ನಲ್ಲಿ ಭಾಗವಹಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳಿಂದ ಕಂಪೆನಿಗಳು ಕಡ್ಡಾಯವಾಗಿ ರಾಜಕೀಯ ಮತ್ತು ಭದ್ರತಾ ಅನುಮತಿ ಹೊಂದಿರಬೇಕು ಎಂದು ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಅಂದರೆ ಇದರರ್ಥ ಚೀನಾ ದೇಶದ ಕಂಪೆನಿಗಳು ಭದ್ರತಾ ಅನುಮತಿ ಪಡೆಯದೆ ಭಾರತದ ಇಂಧನ, ರೈಲು ಮತ್ತು ಟೆಲಿಕಾಂ ಪ್ರಾಜೆಕ್ಟ್ ಗಳ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಕೈಗಾರಿಕೆಗಳ ಮತ್ತು ಆಂತರಿಕ ವ್ಯಾಪಾರದ ಅಭಿವೃದ್ಧಿ ಇಲಾಖೆ ರಚಿಸಿರುವ ದಾಖಲಾತಿ ಸಮಿತಿಯು ಇದರ ಸ್ಮರ್ಧಾತ್ಮಕ ಪ್ರಾಧಿಕಾರವಾಗಿರುತ್ತದೆ. ಭಾರತದ ಜೊತೆ ಗಡಿಯನ್ನು ಹಂಚಿಕೊಂಡಿರುವ ದೇಶಗಳಿಗೆ ಮಾತ್ರ ಅನ್ವಯವಾಗುತ್ತದೆ.

ಈ ಮಾರ್ಗಸೂಚಿಯನ್ನು ಅನುಸರಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಪತ್ರ ಬರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT