ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ 
ದೇಶ

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ನಿಂದ ಮರಣ ಪ್ರಮಾಣ ತೀರಾ ಕಡಿಮೆ: ಕೇಂದ್ರ ಸಚಿವ ಹರ್ಷವರ್ಧನ್

ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ನವದೆಹಲಿ: ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹಿನ್ನಲೆಯಲ್ಲಿ ಇಂದು ಸುದ್ದಿಗೋಷ್ಛಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಡಾ.ಹರ್ಷವರ್ಧನ್ ಅವರು, ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಇದೆ. ದೇಶದಲ್ಲಿ ಈ ವರೆಗೂ 1.25 ಮಿಲಿಯನ್ ಕೊರೋನಾ ಸೋಂಕು ಪ್ರಕರಣಗಳಿದ್ದು, 30 ಸಾವಿರ ಸಾವಿನ ಸಂಖ್ಯೆ ಇದೆ. ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಇದ್ದು, ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ಕೇವಲ ಶೇ.2.3ರಷ್ಟಿದೆ ಎಂದು ಹೇಳಿದರು.

ಅಂತೆಯೇ ಭಾರತದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಿದ್ದು, ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ.63.45ಕ್ಕೆ ಏರಿಕೆಯಾಗಿದೆ. ಈ ವರೆಗೂ 15 ಮಿಲಿಯನ್ ಗೂ ಅಧಿಕ ಕೋವಿಡ್ ಟೆಸ್ಟ್ ಗಳನ್ನು ಮಾಡಲಾಗಿದ್ದು, ಪ್ರತಿ ನಿತ್ಯ 0.35ಮಿಲಿಯನ್ ಕೋವಿಡ್ ನಡೆಸಲಾಗುತ್ತಿದೆ. ಈ ಪ್ರಮಾಣವನ್ನು ದಿನಕ್ಕೆ 1 ಮಿಲಿಯನ್ ಟೆಸ್ಚ್ ಗಳಿಗೆ ಏರಿಕೆ ಮಾಡುವ ಗುರಿ ಇದೆ ಎಂದು ಸಚಿವರು ಹೇಳಿದರು.

ದೇಶಾದ್ಯಂತ ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಸೋಂಕಿತರ ಏರಿಕೆ
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 49,310 ಮಂದಿಯಲ್ಲಿ ಹೊಸದಾಗಿ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು,  ದೇಶದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 740 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 30,601ಕ್ಕೆ ತಲುಪಿದೆ. 12,87,945 ಮಂದಿ ಸೋಂಕಿತರ ಪೈಕಿ 8,17,209 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿನ್ನೂ 4,40,135 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT