ಗುಲಾಬ್ ಚಂದ್ ಕಟಾರಿಯಾ 
ದೇಶ

ರಾಜಸ್ಥಾನ ಬಿಕ್ಕಟ್ಟು: ಕಾಂಗ್ರೆಸ್ ಶಾಸಕರಿಂದ ಧರಣಿ, ಸಿಆರ್ ಪಿಎಫ್ ನಿಯೋಜಿಸುವಂತೆ ಬಿಜೆಪಿ ಒತ್ತಾಯ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿತ ಶಾಸಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ಶುಕ್ರವಾರ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ. 

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿತ ಶಾಸಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ಶುಕ್ರವಾರ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ. 

ಕಾಂಗ್ರೆಸ್ ಶಾಸಕರು ರಾಜಭವನದಲ್ಲಿ ಧರಣಿ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ಬಿಜೆಪಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕೂಡಲೇ ಸಿಆರ್ ಪಿಎಫ್ ಪಡೆಯನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದೆ.

ಜನ ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಹೀಗಾಗಿ ನಾವು ರಾಜಸ್ಥಾನ ಪೊಲೀಸರನ್ನು ನಂಬಲು ಸಾಧ್ಯವಿಲ್ಲ. ರಾಜ್ಯದಲ್ಲಿ ಸಿಆರ್ ಪಿಎಫ್ ನಿಯೋಜಿಸಬೇಕು ಎಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು ಹೇಳಿದ್ದಾರೆ.

ಅಶೋಕ್ ಗೆಹ್ಲೋಟ್ ಅವರು ಇಂದು ತಮ್ಮ ಬೆಂಬಲಿಗ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಕಲರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಸೋಮವಾರದಿಂದ ರಾಜ್ಯ ವಿಧಾನಸಭೆ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ರಾಜ್ಯಪಾಲರ ಭೇಟಿ ಬಳಿಕ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಈಗ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿತ ಶಾಸಕರು ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದು, ರಾಜ್ಯಪಾಲರು ವಿಧಾನಸಭೆ ಅಧಿವೇಶನ ಕರೆಯುವವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT