ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಹಿರಿಯ ಅಧಿಕಾರಿಗೆ ಗುಂಡಿಕ್ಕಿ ಕೊಂದು, ತಾನೂ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್‍ ಯೋಧ ಸಾವು

ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಸಬ್ ಇನ್ಸ್ ಪೆಕ್ಟರ್ ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಲೋಧಿ ಎಸ್ಟೇಟ್ ಪ್ರದೇಶದಲ್ಲಿ ನಡೆದಿದೆ.

ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಸಬ್ ಇನ್ಸ್ ಪೆಕ್ಟರ್ ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಲೋಧಿ ಎಸ್ಟೇಟ್ ಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಕಳೆದ ರಾತ್ರಿ 10.30ರ ಹೊತ್ತಿಗೆ ದೆಹಲಿಯ 61, ಲೋಧಿ ಎಸ್ಟೇಟ್ ನ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ನೀಡಿರುವ ಬಂಗಲೆಯಲ್ಲಿ ನಡೆದಿದೆ.ಸಬ್ ಇನ್ಸ್ ಪೆಕ್ಟರ್ ಕರ್ನೈಲ್ ಸಿಂಗ್(55 ವರ್ಷ) ಮತ್ತು ಹಿರಿಯ ಇನ್ಸ್ ಪೆಕ್ಟರ್ ದಶ್ರತ್ ಸಿಂಗ್(56ವ) ಮಧ್ಯೆ ತೀವ್ರ ಮಟ್ಟದಲ್ಲಿ ಮಾತಿನ ಚಕಮಕಿ ನಡೆದ ನಂತರ ಈ ಕೃತ್ಯವೆಸಗಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ಇನ್ಸ್ ಪೆಕ್ಟರ್ ಅವರನ್ನು ತಮ್ಮ ಸರ್ವಿಸ್ ಪಿಸ್ತೂಲ್ ನಿಂದ ಗುಂಡಿಕ್ಕಿ ಕೊಂದು ನಂತರ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಉದಂಪುರ್ ಮೂಲದ ಸಬ್ ಇನ್ಸ್ ಪೆಕ್ಟರ್ ಆಗಿದ್ದು ಇನ್ಸ್ ಪೆಕ್ಟರ್ ಹರ್ಯಾಣದ ರೊಹ್ಟಕ್ ನವರಾಗಿದ್ದಾರೆ.

ದುರ್ಘಟನೆ ನಡೆದು ಮಾಹಿತಿ ಸಿಗುತ್ತಲೇ ಅರೆ ಸೇನಾಪಡೆಯ ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT