ಸಾಂದರ್ಭಿಕ ಚಿತ್ರ 
ದೇಶ

ವಂದೇ ಭಾರತ್ ಮಿಷನ್: ಆಗಸ್ಟ್ 1ರಿಂದ ಐದನೇ ಹಂತ ಆರಂಭ

ಕೊರೋನಾವೈರಸ್ ಕಾರಣದಿಂದ ವಿದೇಶಗಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಐದನೇ ಹಂತ ಆಗಸ್ಟ್ 1ರಿಂದ ಆರಂಭವಾಗಲಿದೆ.

ನವದೆಹಲಿ: ಕೊರೋನಾವೈರಸ್ ಕಾರಣದಿಂದ ವಿದೇಶಗಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಐದನೇ ಹಂತ ಆಗಸ್ಟ್ 1ರಿಂದ ಆರಂಭವಾಗಲಿದೆ.

ವಂದೇ ಭಾರತ್ ಮಿಷನ್ ಅಡಿಯಲ್ಲಿ ಈಗಾಗಲೇ 53 ವಿಮಾನಗಳಿಂದ ವಿದೇಶದಲ್ಲಿ ಸಿಲುಕಿದ್ದ  2.5 ಲಕ್ಷಕ್ಕೂ ಹೆಚ್ಚು  ಭಾರತೀಯರನ್ನು
ಕರೆತರಲಾಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 1ರಿಂದ ಐದನೇ ಹಂತ ಆರಂಭವಾಗಲಿದ್ದು, ಹೆಚ್ಚುವರಿ ವಿಮಾನ ಒದಗಿಸುವ ಬಗ್ಗೆ ಶೀಘ್ರದಲ್ಲಿಯೇ ಮಾಹಿತಿ
ನೀಡಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ. 

ಈ ಹಂತದಲ್ಲಿ ಅಮೆರಿಕಾ, ಕೆನಡಾ, ಕಥರ್, ಒಮಾನ್, ಯುಎಇ, ಆಸ್ಟ್ರೇಲಿಯಾ, ಜರ್ಮನಿ, ಥೈಲ್ಯಾಂಡ್, ಸಿಂಗಾಪುರ
ಇಂಗ್ಲೆಂಡ್, ಜರ್ಮನಿ, ಸೌದಿ ಅರಬೀಯಾ, ಬಹ್ರೇನ್, ನ್ಯೂಜಿಲೆಂಡ್, ಫಿಲಿಪೈನ್ಸ್  ಮತ್ತಿತರ ಅನೇಕ ರಾಷ್ಟ್ರಗಳಿಗೆ
ವಿಮಾನಗಳನ್ನು ಕಳುಹಿಸಲು ಯೋಜನೆ ಹಾಕಿಕೊಳ್ಳಲಾಗಿದೆ. 

ಈ ಹಿಂದೆ ಮಾಡಿದ್ದಂತೆ ಈ ಹಂತದಲ್ಲಿ ಹೆಚ್ಚುವರಿ ವಿಮಾನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ವಿಮಾನಯಾನ ಸಚಿವ
ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. 

ವಂದೆ ಭಾರತ್ ಮಿಷನ್ ಅಡಿಯಲ್ಲಿ ಜುಲೈ 22ರವರೆಗೂ ಕೊರೋನಾವೈರಸ್ ಕಾರಣದಿಂದ ವಿದೇಶದಲ್ಲಿ ಸಿಲುಕಿದ್ದ ಸುಮಾರು 7.88 ಲಕ್ಷ ಭಾರತೀಯರನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 

ಸುಮಾರು 1,03,976 ಭಾರತೀಯರು ನೇಪಾಳ, ಭೂತಾನ್, ಬಾಂಗ್ಲಾದೇಶದಿಂದ ಭೂ ಗಡಿಗಳ ಮೂಲಕ ಬಂಧಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಕಳೆದ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಮೇ 7ರಿಂದ ಸರ್ಕಾರ ವಂದೇ ಭಾರತ್ ಮಿಷನ್ ಆರಂಭಿಸಿದ್ದು, ನಾಲ್ಕನೇ ಹಂತ ಪ್ರಗತಿಯಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT