ಪ್ರಿಯಾಂಕ ಗಾಂಧಿ ವಾದ್ರಾ 
ದೇಶ

ಸರ್ಕಾರಿ ಬಂಗಲೆ ಖಾಲಿ ಮಾಡುವ ಮುನ್ನ ಹೊಸದಾಗಿ ಬರುವ ಬಿಜೆಪಿ ನಾಯಕನನ್ನು ಚಹಾ ಸೇವನೆಗೆ ಕರೆದ ಪ್ರಿಯಾಂಕ ಗಾಂಧಿ!

ಸರ್ಕಾರಿ ಬಂಗಲೆಯನ್ನು ತ್ಯಜಿಸುವುದಕ್ಕೆ ಮೊದಲು ಆ ಮನೆಗೆ ಪ್ರವೇಶಿಸಿ ವಾಸ್ತವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲುನಿಯವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಚಹಾ ಸೇವನೆಗೆ ಕರೆದಿದ್ದಾರೆ.

ನವದೆಹಲಿ: ಸರ್ಕಾರಿ ಬಂಗಲೆಯನ್ನು ತ್ಯಜಿಸುವುದಕ್ಕೆ ಮೊದಲು ಆ ಮನೆಗೆ ಪ್ರವೇಶಿಸಿ ವಾಸ್ತವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲುನಿಯವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಚಹಾ ಸೇವನೆಗೆ ಕರೆದಿದ್ದಾರೆ.

ದೆಹಲಿಯ 35 ಲೋಧಿ ಎಸ್ಟೇಟ್ ಬಂಗಲೆಯಲ್ಲಿ 1997ರಿಂದ ಪ್ರಿಯಾಂಕಾ ಗಾಂಧಿ ವಾಸವಾಗಿದ್ದರು. ಅವರ ವಿಶೇಷ ರಕ್ಷಣಾ ಗುಂಪು(ಎಸ್ ಪಿಜಿ) ಭದ್ರತೆಯನ್ನು ಗೃಹ ಸಚಿವಾಲಯ ವಾಪಸ್ ಪಡೆದ ನಂತರ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೊಟೀಸ್ ಜಾರಿ ಮಾಡಿತ್ತು.

ಜುಲೈ ಒಂದರಿಂದ ಅವರ ಸರ್ಕಾರಿ ನಿವಾಸದ ಸೌಲಭ್ಯ ರದ್ದಾಗಿರುವುದರಿಂದ ಆಗಸ್ಟ್ 1ರೊಳಗೆ ಮನೆ ಖಾಲಿ ಮಾಡಬೇಕೆಂದು ನೊಟೀಸ್ ನಲ್ಲಿ ಸೂಚಿಸಲಾಗಿತ್ತು.

ಬರುವ ಆಗಸ್ಟ್ 1ರೊಳಗೆ ಪ್ರಿಯಾಂಕಾ ಅವರು ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಲಿದ್ದು ಬಿಟ್ಟು ಹೋಗುವ ಸಂದರ್ಭದಲ್ಲಿ ಅಲ್ಲಿ ವಾಸಿಸಲು ಬರುತ್ತಿರುವ ಬಿಜೆಪಿ ನಾಯಕ ಅನಿಲ್ ಬಲುನಿ ಮತ್ತು ಅವರ ಪತ್ನಿಗೆ ಚಹಾ ಸೇವನೆಗೆ ಬರುವಂತೆ ಆಹ್ವಾನಿಸಿದ್ದಾರೆ. ಇದಕ್ಕೆ ಅನಿಲ್ ಬಲುನಿ ಅವರ ಕಡೆಯಿಂದ ಪ್ರತಿಕ್ರಿಯೆ ಬರಬೇಕಷ್ಟೆ.

ಸದ್ಯ ಪ್ರಿಯಾಂಕಾ ಅವರು ಗುರುಗ್ರಾಮ್ ನ ತಮ್ಮ ನಿವಾಸದಲ್ಲಿ ವಾಸಿಸುತ್ತಿದ್ದು ನಂತರದ ದಿನಗಳಲ್ಲಿ ದೆಹಲಿಯಲ್ಲಿ ಮನೆ ಮಾಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT