ಬಿಜೆಪಿ ಶಾಸಕ ಲೋನಿ 
ದೇಶ

ಮುಸ್ಲಿಮರು ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ತಮ್ಮ ಮಕ್ಕಳನ್ನು ಬಲಿಕೊಡಲಿ: ವಿವಾದಲ್ಲಿ ಬಿಜೆಪಿ ಶಾಸಕ

ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ಮುಸ್ಲಿಮರು ತಮ್ಮ ಮಕ್ಕಳನ್ನು ಬಲಿ ನೀಡಲಿ ಎಂದು ಹೇಳುವ ಮೂಲಕ ಘಾಜಿಯಾಬಾದ್'ನ ವಿಧಾನಸಭಾ ಕ್ಷೇತ್ರ ಲೋನಿಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಅವರು ವಿವಾದಲ್ಲಿ ಸಿಲುಕಿಕೊಂಡಿದ್ದಾರೆ. 

ಘಾಜಿಯಾಬಾದ್: ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ಮುಸ್ಲಿಮರು ತಮ್ಮ ಮಕ್ಕಳನ್ನು ಬಲಿ ನೀಡಲಿ ಎಂದು ಹೇಳುವ ಮೂಲಕ ಘಾಜಿಯಾಬಾದ್'ನ ವಿಧಾನಸಭಾ ಕ್ಷೇತ್ರ ಲೋನಿಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಅವರು ವಿವಾದಲ್ಲಿ ಸಿಲುಕಿಕೊಂಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಂಸವು ಕೊರೋನಾವೈರಸನ್ನು ಹರಡುತ್ತಿದೆ. ಹೀಗಾಗಿ ಜನರು ಮುಗ್ಧ ಪ್ರಾಣಿಗಳನ್ನು ಬಲಿಕೊಡಬಾರದು. ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನು ಬಲಿಕೊಡುವ ಜನರು ತಮ್ಮ ಮಕ್ಕಳನ್ನು ಬಲಿಕೊಡಲಿ. ಜನರು ಮಾಂಸಾಹಾರ ಹಾಗೂ ಮದ್ಯಪಾನ ಮಾಡಲು ನಾವು ಬಿಡುವುದಿಲ್ಲ. ಮುಗ್ಧ ಪ್ರಾಣಿಗಳನ್ನು ಬಲಿಕೊಟ್ಟು ಕೊರೋನಾ ಸೋಂಕು ಹರಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮಸೀದಿಗಳು, ದೇವಾಲಾಯಕ್ಕೆ ತೆರಳದೆ, ನಮಾಜ್ ಹಾಗೂ ಪ್ರಾರ್ಥನೆ ಸಲ್ಲಿಸದೆ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆ. ಅದೇ ರೀತಿಯಲ್ಲಿಯೇ ಪ್ರಾಣಿಗಳ ಬಲಿಕೊಡುವುದನ್ನೂ ಜನರು ಕೈಬಿಡಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT