ಬಿಜೆಪಿ ಶಾಸಕ ಲೋನಿ 
ದೇಶ

ಮುಸ್ಲಿಮರು ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ತಮ್ಮ ಮಕ್ಕಳನ್ನು ಬಲಿಕೊಡಲಿ: ವಿವಾದಲ್ಲಿ ಬಿಜೆಪಿ ಶಾಸಕ

ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ಮುಸ್ಲಿಮರು ತಮ್ಮ ಮಕ್ಕಳನ್ನು ಬಲಿ ನೀಡಲಿ ಎಂದು ಹೇಳುವ ಮೂಲಕ ಘಾಜಿಯಾಬಾದ್'ನ ವಿಧಾನಸಭಾ ಕ್ಷೇತ್ರ ಲೋನಿಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಅವರು ವಿವಾದಲ್ಲಿ ಸಿಲುಕಿಕೊಂಡಿದ್ದಾರೆ. 

ಘಾಜಿಯಾಬಾದ್: ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ಮುಸ್ಲಿಮರು ತಮ್ಮ ಮಕ್ಕಳನ್ನು ಬಲಿ ನೀಡಲಿ ಎಂದು ಹೇಳುವ ಮೂಲಕ ಘಾಜಿಯಾಬಾದ್'ನ ವಿಧಾನಸಭಾ ಕ್ಷೇತ್ರ ಲೋನಿಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಅವರು ವಿವಾದಲ್ಲಿ ಸಿಲುಕಿಕೊಂಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಂಸವು ಕೊರೋನಾವೈರಸನ್ನು ಹರಡುತ್ತಿದೆ. ಹೀಗಾಗಿ ಜನರು ಮುಗ್ಧ ಪ್ರಾಣಿಗಳನ್ನು ಬಲಿಕೊಡಬಾರದು. ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನು ಬಲಿಕೊಡುವ ಜನರು ತಮ್ಮ ಮಕ್ಕಳನ್ನು ಬಲಿಕೊಡಲಿ. ಜನರು ಮಾಂಸಾಹಾರ ಹಾಗೂ ಮದ್ಯಪಾನ ಮಾಡಲು ನಾವು ಬಿಡುವುದಿಲ್ಲ. ಮುಗ್ಧ ಪ್ರಾಣಿಗಳನ್ನು ಬಲಿಕೊಟ್ಟು ಕೊರೋನಾ ಸೋಂಕು ಹರಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮಸೀದಿಗಳು, ದೇವಾಲಾಯಕ್ಕೆ ತೆರಳದೆ, ನಮಾಜ್ ಹಾಗೂ ಪ್ರಾರ್ಥನೆ ಸಲ್ಲಿಸದೆ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆ. ಅದೇ ರೀತಿಯಲ್ಲಿಯೇ ಪ್ರಾಣಿಗಳ ಬಲಿಕೊಡುವುದನ್ನೂ ಜನರು ಕೈಬಿಡಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT