ಪ್ರಿಯಾಂಕಾ ಗಾಂಧಿ 
ದೇಶ

ಚಹಾ ಕೂಟಕ್ಕೆ ಬರಲಾಗಲಿಲ್ಲ, ನೀವು ಭೋಜನ ಕೂಟಕ್ಕೆ ಬನ್ನಿ: ಅನಿಲ್ ಬಲೂನಿಯಿಂದ ಪ್ರಿಯಾಂಕಾಗೆ ಆಹ್ವಾನ

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ತನಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವ ಮುನ್ನ, ಆ ಬಂಗಲೆಯಲ್ಲೇ ವಾಸ್ಥವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲೂನಿ ಮತ್ತು ಅವರ ಕುಟುಂಬವನ್ನು ಚಹಾ ಕೂಟಕ್ಕೆ ಆಹ್ವಾನಿಸಿದ್ದರು.

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ತನಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವ ಮುನ್ನ, ಆ ಬಂಗಲೆಯಲ್ಲೇ ವಾಸ್ಥವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲೂನಿ ಮತ್ತು ಅವರ ಕುಟುಂಬವನ್ನು ಚಹಾ ಕೂಟಕ್ಕೆ ಆಹ್ವಾನಿಸಿದ್ದರು.

ಆದರೆ ಚಹಾಕೂಟಕ್ಕೆ ಆಗಮಿಸದ ಅನಿಲ್ ಬಲೂನಿ ಪ್ರಿಯಾಂಕಾ ಅವರ ಕುಟುಂಬವನ್ನು ಭೂಜನಕೂಟಕ್ಕೆ ಆಹ್ವಾನಿಸಿದ್ದಾರೆ. ಚಹಾ ಕೂಟಕ್ಕೆ ಬರಲಾಗಲಿಲ್ಲ, ಹೀಗಾಗಿ ನೀವು ಭೋಜನ ಕೂಟಕ್ಕೆ ಬನ್ನಿ, ಉತ್ತರಾಖಂಡ್ ನ ಎಲ್ಲಾ ಸಾಂಪ್ರಾದಾಯಿಕ ಆಹಾರದ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ನಾನು ಕ್ಯಾನ್ಸರ್ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದೇನೆ, ಸದ್ಯ ವೈದ್ಯರು ಮನೆಯಲ್ಲೇ ಇರಲು ಹೇಳಿದ್ದಾರೆ, ಹೀಗಾಗಿ ನೀವು ಭೋಜನಕ್ಕೆ ಬನ್ನಿ ಎಂದು ಬಲುನಿ ಪ್ರಿಯಾಂಕಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಜುಲೈ 1ಕ್ಕೆ ನೊಟೀಸ್ ಜಾರಿ ಮಾಡಿರುವ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಆಗಸ್ಟ್ 01 ರ ಒಳಗಾಗಿ ಮನೆಯನ್ನು ಖಾಲಿ ಮಾಡುವಂತೆ ಸೂಚಿಸಿತ್ತು. ಹೀಗಾಗಿ ಭವಿಷ್ಯದಲ್ಲಿ ಆ ಮನೆಯಲ್ಲಿ ವಾಸ್ತವ್ಯ ಹೂಡಲಿರುವ ಅನಿಲ್ ಬಲೂನಿ ಅವರ ಜೊತೆ ಒಂದು ಚಹಾ ಕೂಟ ಏರ್ಪಡಿಸಲು ಪ್ರಿಯಾಂಕ ಮುಂದಾಗಿದ್ದರು. 

“ಸರ್ಕಾರದ ಆದೇಶಕ್ಕೆ  ನಾವು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದೇವೆ. ಅಲ್ಲದೆ, ನಿಗದಿತ ಸಮಯದ ಒಳಗಾಗಿ ಸರ್ಕಾರಿ ವಸತಿಯನ್ನು ಖಾಲಿ ಮಾಡಲು ನಾವು ಸಿದ್ದರಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ಧಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT