ಮಾಯಾವತಿ 
ದೇಶ

ಪಕ್ಷದ ಶಾಸಕರು ಕಾಂಗ್ರೆಸ್ ನಲ್ಲಿ ವಿಲೀನ: ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ ಬಿಎಸ್ ಪಿ

ರಾಜಸ್ತಾನದ ಆಡಳಿತ ಪಕ್ಷ ತಮ್ಮ ಪಕ್ಷದ ಆರು ಶಾಸಕರನ್ನು ಕಾಂಗ್ರೆಸ್ ನೊಂದಿಗೆ ವಿಲೀನಗೊಳಿಸಿಕೊಂಡಿರುವ ಸಂಬಂಧ ಬಿಎಸ್ ಪಿ ರಾಜಸ್ತಾನ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಜೈಪುರ: ರಾಜಸ್ತಾನದ ಆಡಳಿತ ಪಕ್ಷ ತಮ್ಮ ಪಕ್ಷದ ಆರು ಶಾಸಕರನ್ನು ಕಾಂಗ್ರೆಸ್ ನೊಂದಿಗೆ ವಿಲೀನಗೊಳಿಸಿಕೊಂಡಿರುವ ಸಂಬಂಧ ಬಿಎಸ್ ಪಿ ರಾಜಸ್ತಾನ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಸಂದೀಪ್ ಯಾದವ್, ವಾಜಿಬ್ ಅಲಿ, ದೀಪ್ ಚಂದ್ ಖಾರಿಯಾ, ಲಖನ್ ಮೀನಾ, ಜೋಗೇಂದ್ರ ಅಹ್ವಾನ ಮತ್ತು ರಾಜೇಂದ್ರ ಗುದಾ 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿ ಟಿಕೆಟ್ ನಿಂದ ಗೆಲುವು ಸಾಧಿಸಿದ್ದರು. ಅವರು ಸೆಪ್ಟೆಂಬರ್ 2019 ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

ಬಿಎಸ್ ಪಿ ಶಾಸಕರು ಕಾಂಗ್ರೆಸ್ ಜೊತೆ ವಿಲೀನವಾಗಿರುವ ಸಂಬಂಧ ನಾವು ಇಂದು ರಾಜಸ್ತಾನ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ರಾಜಸ್ತಾನ ಬಿಎಸ್ ಪಿ ಅಧ್ಯಕ್ಷ ಬಗ್ವಾನ್ ಸಿಂಗ್ ಬಾಬಾ ಹೇಳಿದ್ದಾರೆ.

ಇದರ ಜೊತೆಗೆ ನಾವು ವಿಧಾನಸಭೆ ಸ್ಪೀಕರ್ ಗೂ ವಿಲೀನ ಪ್ರಶ್ನಿಸಿ ಅರ್ಜಿ ಸಲ್ಲಿಸುತ್ತೇವೆ  ಮತ್ತು ವಿಲೀನವನ್ನು ರದ್ದುಗೊಳಿಸಲು ಕೋರಿದ್ದೇವೆ ಎಂದು ಹೇಳಿದ್ದಾರೆ.

ತಮ್ಮ ದೂರಿನ ಮೇರೆಗೆ ವಿಧಾನಸಭೆ ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಮದನ್ ದಿಲಾವರ್ ಮಂಗಳವಾರ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT