ದೇಶ

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳ ಪರ್ವಕ್ಕೆ ನಾಂದಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಕ್ಕೆ ಸಚಿವ ಸಂಪುಟ ಅನುಮೋದನೆ

ಶಾಲಾ ದಾಖಲಾತಿ ಹೆಚ್ಚಳ ಸೇರಿದಂತೆ ಉನ್ನತ ಶಿಕ್ಷಣದಲ್ಲಿ ಪ್ರಮುಖ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ರೂಪಿಸಿರುವ ಬಹುನಿರೀಕ್ಷಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- 2020 ಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ನವದೆಹಲಿ:  ಶಾಲಾ ದಾಖಲಾತಿ ಹೆಚ್ಚಳ ಸೇರಿದಂತೆ ಉನ್ನತ ಶಿಕ್ಷಣದಲ್ಲಿ ಪ್ರಮುಖ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ರೂಪಿಸಿರುವ ಬಹುನಿರೀಕ್ಷಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- 2020 ಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್‌ ಪೋಕ್ರಿಯಾಲ್‌ ನಿಶಾಂಕ್‌ ಕೂಡ ಉಪಸ್ಥಿತರಿದ್ದರು.

ಸಚಿವ ಸಂಪುಟ ತೀರ್ಮಾನಗಳ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಕಾರ್ಯದರ್ಶಿ ಅಮಿತ್ ಖರೆ, ರಾಷ್ಟ್ರೀಯ ಶಿಕ್ಷಣ ನೀತಿ ಬಹು-ವಿಷಯಗಳ ಶಿಕ್ಷಣವನ್ನು ಉತ್ತೇಜಿಸುತ್ತದೆ ಮತ್ತು ಐದು ವರ್ಷದ ಪದವಿ / ಸ್ನಾತಕೋತ್ತರ ಕೋರ್ಸ್ ಅನ್ನು ಸಂಯೋಜಿಸುತ್ತದೆ ಎಂದು ಹೇಳಿದ್ದಾರೆ

ಅಲ್ಲದೆ, ಇ-ಕೋರ್ಸ್‌ಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಅಭಿವೃದ್ಧಿಪಡಿಸಲಾಗುವುದು, ವರ್ಚುಯಲ್ ಪ್ರಯೋಗಾಲಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆ (ಎನ್‌ಇಟಿಎಫ್) ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.. 

ಗಮನಾರ್ಹವಾಗಿ, ಹೊಸ ಶಿಕ್ಷಣ ನೀತಿಯ ರಚಿಸುವುದು ಮತ್ತು ಅದನ್ನು ಅಂತಿಮಗೊಳಿಸುವ ಪ್ರಕ್ರಿಯೆಗೆ ಹಿಂದಿನ ಮೋದಿ ಸರ್ಕಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಚಾಲನೆ ನೀಡಿದ್ದರು. ಈ ನೀತಿಯನ್ನು ಅಂತಿಮಗೊಳಿಸಿ, ಅನುಮೋದನೆ ಪಡೆಯಲು ಆರು ವರ್ಷಗಳು ಬೇಕಾಯಿತು.

ಮೊದಲು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಹೊಸ ಶಿಕ್ಷಣ ನೀತಿ ರೂಪಿಸಿದ್ದರು. ನಂತರ ದೇಶದ ಶಿಕ್ಷಣ ವಲಯದಲ್ಲಿ ಬದಲಾವಣೆಗಳು ಉಂಟಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸ ನೀತಿ ರಚಿಸಿತು. ಈ ಮೂಲಕ ಡಿಜಿಟಲ್‌ ಶಿಕ್ಷಣ ಮತ್ತು ಆವಿಷ್ಕಾರಗಳು ಮತ್ತು ತಂತ್ರಜ್ಞಾನಗಳನ್ನು ಶಿಕ್ಷಣದಲ್ಲಿ ಸೇರಿಸಲು ಸರ್ಕಾರ ನಿರ್ಧರಿಸಿದೆ.

ನೀತಿಯ ಇತರ ವೈಶಿಷ್ಟ್ಯಗಳೆಂದರೆ, ಶ್ರೇಣೀಕೃತ ಶೈಕ್ಷಣಿಕ ವ್ಯವಸ್ಥೆ, ಶಿಕ್ಷಣ ಸಂಸ್ಥೆಗಳ ಆಡಳಿತಾತ್ಮಕ ಮತ್ತು ಆರ್ಥಿಕ ಸ್ವಾಯತ್ತತೆ ಮತ್ತು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಒಂದೇ ನಿಯಂತ್ರಕ ಸಂಸ್ಥೆ ಇರಲಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT