ಒಮರ್ ಅಬ್ದುಲ್ಲಾ 
ದೇಶ

ಜಮ್ಮು-ಕಾಶ್ಮೀರಕ್ಕೆ ಪುನಃ ರಾಜ್ಯ ಸ್ಥಾನಮಾನಕ್ಕಾಗಿ ನಾನು ಬೇಡಿಕೆ ಇಟ್ಟಿಲ್ಲ: ಓಮರ್ ಅಬ್ದುಲ್ಲಾ

ಕೇಂದ್ರಾಡಳಿತವಾಗಿರುವ ಜಮ್ಮು-ಕಾಶ್ಮೀರದ ವಿಧಾನಸಭೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂಬುದನ್ನು ಮಾಧ್ಯಮದವರು ತಿರುಚಿದ್ದಾರೆಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಆರೋಪಿಸಿದ್ದಾರೆ. 

ಶ್ರೀನಗರ: ಕೇಂದ್ರಾಡಳಿತವಾಗಿರುವ ಜಮ್ಮು-ಕಾಶ್ಮೀರದ ವಿಧಾನಸಭೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂಬುದನ್ನು ಮಾಧ್ಯಮದವರು ತಿರುಚಿದ್ದಾರೆಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಆರೋಪಿಸಿದ್ದಾರೆ. 

ತಮ್ಮ ಲೇಖನದಲ್ಲಿದ್ದ ಅಂಶವನ್ನು ತಿರುಚಿದ್ದ ಪತ್ರಕರ್ತರು ತಾವು ಜಮ್ಮು-ಕಾಶ್ಮೀರಕ್ಕೆ ಪುನಃ ರಾಜ್ಯದ ಸ್ಥಾನಮಾನವನ್ನು ಕಲ್ಪಿಸಬೇಕೆಂಬ ಬೇಡಿಕೆ ಮುಂದಿಟ್ಟಿದ್ದೆ ಎಂಬ ಅರ್ಥದಲ್ಲಿ ಸುದ್ದಿ ಪ್ರಕಟಿಸಿದ್ದಾರೆ. ಆದರೆ ನಾನು ಅಂತಹ ಬೇಡಿಕೆ ಮುಂದಿಟ್ಟಿರಲಿಲ್ಲ ಎಂದು ಓಮರ್ ಅಬ್ದುಲ್ಲಾ ಸಮರ್ಥಿಸಿಕೊಂಡಿದ್ದಾರೆ. 

ತಮ್ಮ ಲೇಖನದಲ್ಲಿ ನಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಸ್ ನೀಡಬೇಕೆಂಬ ಬೇಡಿಕೆಯನ್ನು ತೋರಿಸಲಿ ಎಂದು ಪತ್ರಕರ್ತರಿಗೆ ಸವಾಲು ಹಾಕಿದ್ದಾರೆ. 

ನನ್ನ ಅಭಿಪ್ರಾಯದೊಂದಿಗೆ ಸಹಮತ ಇಲ್ಲದೇ ಒಪ್ಪದೇ ಇದ್ದರೆ ಸಮಸ್ಯೆ ಇಲ್ಲ. ಆದರೆ ನಾನು ಹೇಳದೇ ಇರುವುದನ್ನು ಹೇಳಿದ್ದೇನೆಂದಾಗ ಅದು ನೀವು ಏನೆಂಬುದನ್ನು ತೋರಿಸುತ್ತದೆ ಎಂದು ಓಮರ್ ಅಬ್ದುಲ್ಲಾ ಪತ್ರಕರ್ತರ ವಿರುದ್ಧ ಕಿಡಿ ಕಾರಿದ್ದಾರೆ.

ನನ್ನ ಟ್ವೀಟ್ ನಲ್ಲಿ ಎಲ್ಲಿಯಾದರೂ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನ ವಾಪಸ್ ನೀಡಬೇಕೆಂಬ ಬೇಡಿಕೆ ಇದ್ದರೆ ತೋರಿಸಲಿ ಆಲಸಿ ಪತ್ರಕರ್ತರು ಎಂದು ಕಠಿಣ ಶಬ್ದಗಳಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ