ಅಯೋಧ್ಯೆ 
ದೇಶ

ರಾಮಮಂದಿರ ಶಿಲಾನ್ಯಾಸದ ವೇಳೆ ಅಯೋಧ್ಯೆಯಲ್ಲಿ ದಾಳಿಗೆ ಉಗ್ರರ ಸಂಚು; ಉಗ್ರರಿಗೆ ಐಎಸ್ಐ ತರಬೇತಿ: ಗುಪ್ತಚರ ಇಲಾಖೆ

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. 

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. 

ಅಯೋಧ್ಯೆ ಇಲ್ಲದೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ(ಐಎಸ್ಐ) ನೆರವಿನೊಂದಿಗೆ ಭಾರತದಲ್ಲಿ ವಿಧ್ವಂಸಕ ಸೃಷ್ಟಿಸಲು ಸಂಚು ರೆಡಿಯಾಗಿದೆ ಎಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ಮಾಹಿತಿ ನೀಡಿದೆ. 

ಭಾರತದಲ್ಲಿನ ಪ್ರಸಿದ್ಧ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಆಫ್ಗಾನಿಸ್ತಾನದ ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಎ ಮೊಹಮ್ಮದ್ ಸಂಘಟನೆಗಳು ದಾಳಿ ನಡೆಸಲು ಸಂಚು ರೂಪಿಸಿದ್ದು ಇದಕ್ಕಾಗಿ 3ರಿಂದ 5 ಗುಂಪು ಭಾರತಕ್ಕೆ ನುಗ್ಗಲಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 

ಧಾರ್ಮಿಕ ಕ್ಷೇತ್ರಗಳು ಮತ್ತು ರಾಜಕೀಯ ಮುಖಂಡರ ಮೇಲೆ ದಾಳಿ ಮಾಡಿ ಇದನ್ನು ಆಂತರಿಕ ದಾಳಿ ಎಂದು ಬಿಂಬಿಸಲು ಸಂಚು ರೂಪಿಸಿದ್ದು ಇದು ಅತ್ಯಂತ ಅಪಾಯಕಾರಿಯಾದದ್ದು ಎಂದು ಇಲಾಖೆ ಎಚ್ಚರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT