ಅಯೋಧ್ಯೆ 
ದೇಶ

ರಾಮಮಂದಿರ ಶಿಲಾನ್ಯಾಸದ ವೇಳೆ ಅಯೋಧ್ಯೆಯಲ್ಲಿ ದಾಳಿಗೆ ಉಗ್ರರ ಸಂಚು; ಉಗ್ರರಿಗೆ ಐಎಸ್ಐ ತರಬೇತಿ: ಗುಪ್ತಚರ ಇಲಾಖೆ

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. 

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. 

ಅಯೋಧ್ಯೆ ಇಲ್ಲದೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ(ಐಎಸ್ಐ) ನೆರವಿನೊಂದಿಗೆ ಭಾರತದಲ್ಲಿ ವಿಧ್ವಂಸಕ ಸೃಷ್ಟಿಸಲು ಸಂಚು ರೆಡಿಯಾಗಿದೆ ಎಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ಮಾಹಿತಿ ನೀಡಿದೆ. 

ಭಾರತದಲ್ಲಿನ ಪ್ರಸಿದ್ಧ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಆಫ್ಗಾನಿಸ್ತಾನದ ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಎ ಮೊಹಮ್ಮದ್ ಸಂಘಟನೆಗಳು ದಾಳಿ ನಡೆಸಲು ಸಂಚು ರೂಪಿಸಿದ್ದು ಇದಕ್ಕಾಗಿ 3ರಿಂದ 5 ಗುಂಪು ಭಾರತಕ್ಕೆ ನುಗ್ಗಲಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 

ಧಾರ್ಮಿಕ ಕ್ಷೇತ್ರಗಳು ಮತ್ತು ರಾಜಕೀಯ ಮುಖಂಡರ ಮೇಲೆ ದಾಳಿ ಮಾಡಿ ಇದನ್ನು ಆಂತರಿಕ ದಾಳಿ ಎಂದು ಬಿಂಬಿಸಲು ಸಂಚು ರೂಪಿಸಿದ್ದು ಇದು ಅತ್ಯಂತ ಅಪಾಯಕಾರಿಯಾದದ್ದು ಎಂದು ಇಲಾಖೆ ಎಚ್ಚರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT