ಮನೋಹರ್ ಪರ್ರಿಕರ್ 
ದೇಶ

ಮಹದಾಯಿ ನೀರು ಹಂಚಿಕೆಯಲ್ಲಿ ಮನೋಹರ್ ಪರ್ರಿಕರ್ ರಾಜಿ ಮಾಡಿಕೊಂಡಿದ್ದರೇ?: ವಿವಾದ ಹುಟ್ಟಿಸಿದೆ ಜೀವನ ಚರಿತ್ರೆ!

ಮಹದಾಯಿ ನದಿ ನೀರಿನ ಪಾಲು  ರಾಜ್ಯಕ್ಕೆ ನ್ಯಾಯಯುತವಾಗಿ ಸಿಗುವಲ್ಲಿ ಗೋವಾದ ದಿವಂಗತ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಹೋರಾಟ ಮಾಡಿದ್ದರು, ಗೋವಾದ ಹಿತಾಸಕ್ತಿಗಳ ವಿಚಾರದಲ್ಲಿ ಅವರೆಂದೂ ರಾಜಿ ಮಾಡಿಕೊಂಡಿರಲಿಲ್ಲ ಎಂದು ಅವರ ಬಗ್ಗೆ ಬರೆದಿರುವ ಜೀವನ ಚರಿತ್ರೆಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ ಪ್ರಮೋದ್ ಸಾವಂತ್ ಪ್ರತಿಪಾದಿಸಿದ್ದಾರೆ.

ಬೆಳಗಾವಿ: ಮಹದಾಯಿ ನದಿ ನೀರಿನ ಪಾಲು  ರಾಜ್ಯಕ್ಕೆ ನ್ಯಾಯಯುತವಾಗಿ ಸಿಗುವಲ್ಲಿ ಗೋವಾದ ದಿವಂಗತ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಹೋರಾಟ ಮಾಡಿದ್ದರು, ಗೋವಾದ ಹಿತಾಸಕ್ತಿಗಳ ವಿಚಾರದಲ್ಲಿ ಅವರೆಂದೂ ರಾಜಿ ಮಾಡಿಕೊಂಡಿರಲಿಲ್ಲ ಎಂದು ಅವರ ಬಗ್ಗೆ ಬರೆದಿರುವ ಜೀವನ ಚರಿತ್ರೆಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ ಪ್ರಮೋದ್ ಸಾವಂತ್ ಪ್ರತಿಪಾದಿಸಿದ್ದಾರೆ.

ಭಾಯ್(ಪರ್ರಿಕರ್) ಮತ್ತು ಅವರ ಪರಂಪರೆ ಗೌರವಯುತವಾದ ಸ್ಥಾನಮಾನವನ್ನು ಹೊಂದಿದ್ದಾರೆ. ಗೋವಾ ರಾಜ್ಯದ ಹಿತಕ್ಕಾಗಿ ಅಷ್ಟೊಂದು ಶ್ರಮಿಸಿದ್ದ ವ್ಯಕ್ತಿಯೊಬ್ಬರ ಬಗ್ಗೆ ಮನಬಂದಂತೆ ಬರೆದಿರುವುದರ ಬಗ್ಗೆ ನಿಜಕ್ಕೂ ಬೇಸರವಾಗುತ್ತದೆ. ಕಳೆದ ಹಲವು ದಶಕಗಳಿಂದ ಮಹದಾಯಿ ನದಿ ನೀರನ್ನು ತಮ್ಮ ರಾಜ್ಯಕ್ಕೆ ತಿರುಗಿಸಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ಹೋರಾಡುತ್ತಿದ್ದು ತಮ್ಮ ಸರ್ಕಾರ ಇದಕ್ಕೆ ವಿರೋಧವಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಹೇಳಿದ್ದಾರೆ.

ಸದ್ಗುರು ಪಾಟೀಲ್ ಮತ್ತು ಮಯಾಭೂಷಣ್ ನಗ್ವೆಂಕರ್ ಇಬ್ಬರೂ ಗೋವಾದವರಾಗಿದ್ದು ಅವರು ಮನೋಹರ್ ಪರ್ರಿಕರ್ ಬಗ್ಗೆ “An Extraordinary Life: A Biography of Manohar Parrikar’’ ಎಂಬ ಪುಸ್ತಕ ಬರದಿದ್ದು ಅದರಲ್ಲಿ ಮನೋಹರ್ ಪರ್ರಿಕರ್ ಅವರ ಆಡಳಿತ, ರಾಜಕೀಯ ಜೀವನ, ಗೋವಾದ ಬಗ್ಗೆ ಅವರಿಗಿದ್ದ ನಿಲುವುಗಳ ಬಗ್ಗೆ ನಮೂದಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಯಾಭೂಷಣ್, ನಾವು ಹೇಳಬೇಕಾಗಿದ್ದನ್ನು ಹೇಳಿದ್ದೇವೆ, ಓದುಗರು ಅವರವರ ಅಭಿಪ್ರಾಯ ಹೇಳುತ್ತಾರೆ ಎಂದರಷ್ಟೇ ಹೊರತು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲಿಲ್ಲ.

ಲೇಖಕರು ಪುಸ್ತಕದ 212ನೇ ಪುಟದಲ್ಲಿ, 2018ರ ವಿಧಾನಸಭೆ ಚುನಾಣೆಗೆ ಮುನ್ನ ಬಿಜೆಪಿಯ ಇಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದ ಪರ್ರಿಕರ್, ಮಾನವೀಯ ನೆಲೆಯಲ್ಲಿ ಮಹದಾಯಿ ನದಿ ನೀರನ್ನು ಹಂಚಿಕೆ ಮಾಡಲು ಸಿದ್ದವಿರುವುದಾಗಿ ಹೇಳಿದ್ದರು. ಇದರಿಂದ ಮಹದಾಯಿ ನದಿ ನೀರಿನ ಎರಡು ದಶಕಗಳ ಕಾನೂನು ಹೋರಾಟದಲ್ಲಿ ಗೋವಾಕ್ಕೆ ಹಿನ್ನಡೆಯಾಗಿದೆ ಎಂದು ಬರೆದಿದ್ದಾರೆ.

ಪರ್ರಿಕರ್ ಅವರು ಕರ್ನಾಟಕದ ಬಗ್ಗೆ ಮೃದುಧೋರಣೆ ತಳೆದಿದ್ದು ಅಂದು ವಿರೋಧ ಪಕ್ಷದ ನಾಯಕರಿಗೆ ಇಷ್ಟವಾಗಿರಲಿಲ್ಲ. ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಟೀಕಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT