ಲಡಾಖ್ 
ದೇಶ

ಲಡಾಖ್ ಗಡಿಯಿಂದ ಸೇನೆ ಹಿಂಪಡೆಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ: ಚೀನಾ ಹೇಳಿಕೆ ತಳ್ಳಿಹಾಕಿದ ಭಾರತ

ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡೂ ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂದೆ ಸರಿದಿವೆ ಎಂಬ ಚೀನಾ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಭಾರತ, ಸೇನೆ ಹಿಂಪಡೆಯುವ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದೆ. ಪೂರ್ಣಗೊಂಡಿಲ್ಲ ಎಂದು ಗುರುವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡೂ ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂದೆ ಸರಿದಿವೆ ಎಂಬ ಚೀನಾ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಭಾರತ, ಸೇನೆ ಹಿಂಪಡೆಯುವ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದೆ. ಪೂರ್ಣಗೊಂಡಿಲ್ಲ ಎಂದು ಗುರುವಾರ ಸ್ಪಷ್ಟಪಡಿಸಿದೆ.

ಎರಡು ದಿನಗಳ ಹಿಂದಷ್ಟೇ, ಉಭಯ ದೇಶಗಳ ಮುಂಚೂಣಿ ಗಡಿ ಪಡೆಗಳು ಈಗಾಗಲೇ ಬಹುತೇಕ ಸೇನಾ ನೆಲೆಗಳಲ್ಲಿ ನಿಷ್ಕ್ರಿಯತೆಯನ್ನು ಪೂರ್ಣಗೊಳಿಸಿವೆ. ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ ಎಂದು ಚೀನಾ ಹೇಳಿತ್ತು.

ಈ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್​​​ ಶ್ರೀವಾಸ್ತವ ಅವರು, ಉಭಯ ದೇಶಗಳ ಸೇನಾಪಡೆಗಳು ಲಡಾಖ್​​ ಗಡಿಯ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಚೀನಾ ಹೇಳಿದಂತೆ ಸಂಪೂರ್ಣ ಮುಗಿದಿಲ್ಲ ಎಂದು ಹೇಳಿದ್ದಾರೆ.

ಸದ್ಯದಲ್ಲೇ ಎರಡು ದೇಶಗಳ ಹಿರಿಯ ಸೇನಾಧಿಕಾರಿಗಳು ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿವೆ. ಇಲ್ಲಿ ಶಾಂತಿ ಮಾತುಕತೆಗಳ ಮೂಲಕವೇ ಸಮಸ್ಯೆ ಪರಿಹಾರ ಕಾಣಬೇಕು. ಎರಡೂ ರಾಷ್ಟ್ರಗಳ ಸೇನೆಗಳು ಲಡಾಖ್​​ ಗಡಿಯಿಂದ ಹೇಗೆ ಹಿಂದೆ ಸರಿಯಬೇಕು? ಎಂಬುದನ್ನು ಚರ್ಚಿಸಲಿವೆ ಎಂದು ಅನುರಾಗ್​​ ಶ್ರೀವಾಸ್ತವ ಹೇಳಿದ್ದಾರೆ.

ಲಡಾಖ್ ಗಡಿಯಿಂದ ಬಹುತೇಕವಾಗಿ ಸೈನ್ಯ ತುಕಡಿಗಳನ್ನು ಹಿಂಪಡೆಯಲಾಗಿದೆ ಎಂಬ ಚೀನಾದ ಘೋಷಣೆಯನ್ನು ತಳ್ಳಿಹಾಕಿರುವ ಭಾರತ, ಈ ಹೇಳಿಕೆ ಸರಿಯಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT