ಮಾಯಾವತಿ 
ದೇಶ

ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ದಲಿತ ಶ್ರೀಗಳನ್ನು ಆಹ್ವಾನಿಸಿ: ಮಾಯಾವತಿ

ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಲಿತ ಶ್ರೀಗಳಾದ ಮಹಾಮಂಡೇಶ್ವರ ಕನ್ಹಯ್ಯ ಪ್ರಭುನಂದನ್ ಗಿರಿ ಅವರಿಗೆ ಆಹ್ವಾನ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಶುಕ್ರವಾರ ಒತ್ತಾಯಿಸಿದ್ದಾರೆ...

ಲಖನೌ: ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಲಿತ ಶ್ರೀಗಳಾದ ಮಹಾಮಂಡೇಶ್ವರ ಕನ್ಹಯ್ಯ ಪ್ರಭುನಂದನ್ ಗಿರಿ ಅವರಿಗೆ ಆಹ್ವಾನ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಶುಕ್ರವಾರ ಒತ್ತಾಯಿಸಿದ್ದಾರೆ ಮತ್ತು ಇದು ಜಾತಿರಹಿತ ಸಮಾಜವನ್ನು ಸ್ಥಾಪಿಸುವ ಸಾಂವಿಧಾನಿಕ ಉದ್ದೇಶದ ಮೇಲೆ ಸ್ವಲ್ಪ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಆಹ್ವಾನಿಸದಿರುವ ಬಗ್ಗೆ ಗಿರಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಮಾಯಾವತಿ ಅವರು ಈ ಹೇಳಿಕೆ ನೀಡಿದ್ದಾರೆ.

ಮಹಾಮಂಡೇಶ್ವರ ಸ್ವಾಮಿ ಕನ್ಹಯ್ಯ ಪ್ರಭುನಾಂದನ್ ಗಿರಿ ಅವರ ದೂರನ್ನು ಗಮನದಲ್ಲಿಟ್ಟುಕೊಂಡು, ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಸಮಾರಂಭಕ್ಕೆ 200 ಇತರ ಸಂತರೊಂದಿಗೆ ದಲಿತ ಶ್ರೀಗಳನ್ನು ಆಹ್ವಾನಿಸಿದ್ದರೆ ಚೆನ್ನಾಗಿತ್ತು ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ.

ದಲಿತ ಶ್ರೀಗಳನ್ನು ಆಹ್ವಾನಿಸಿದರೆ ದೇಶದಲ್ಲಿ ಜಾತಿರಹಿತ ಸಮಾಜವನ್ನು ಸ್ಥಾಪಿಸುವ ಸಾಂವಿಧಾನಿಕ ಉದ್ದೇಶದ ಮೇಲೆ ಸ್ವಲ್ಪ ಪರಿಣಾಮ ಬೀರಬಹುದು ಎಂದು ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂಎಂ ಜೋಶಿ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT