ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

ಕೊರೋನಾ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ 'ಭೂಮಿಪೂಜೆ' ಅಗತ್ಯವಿರಲಿಲ್ಲ: ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ

ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಇ- ಭೂಮಿಪೂಜೆ ಸಲಹೆಯನ್ನು ಸಹ ತಿರಸ್ಕರಿಸಿರುವ  ರಾಜ್ ಠಾಕ್ರೆ, ಶಿಲಾನ್ಯಾಸ ಸಮಾರಂಭವನ್ನು ಬಹಳ ಉತ್ಸಾಹದಿಂದ ನಡೆಸಬೇಕು ಎಂದಿದ್ದಾರೆ.

ಮಠಾಠಿಯ ನ್ಯೂಸ್ ಚಾನೆಲ್ ವೊಂದರ ಜೊತೆಗೆ  ಮಾತನಾಡಿದ ಎಂಎನ್ ಎಸ್ ಮುಖ್ಯಸ್ಥ, ಜನರು ವಿವಿಧ ಮನಸ್ಥಿತಿಯಲ್ಲಿರುವ ಈ ಸಂದರ್ಭದಲ್ಲಿ ಭೂಮಿ ಪೂಜೆ ಅಗತ್ಯವಿರಲಿಲ್ಲ. ಎರಡು ತಿಂಗಳ ನಂತರ ಸಹಜ ಪರಿಸ್ಥಿತಿವೇರ್ಪಟ್ಟಿದ್ದಾಗ ಸಮಾರಂಭ ನಡೆಸಬಹುದಾಗಿತ್ತು. ಆಗ ಜನರು ಕೂಡಾ ಉತ್ಸಾಹದಿಂದ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದರು ಎಂದು ಹೇಳಿದರು.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರ ಪ್ರಕಾರ ರಾಮ ಮಂದಿರ ಕಟ್ಟಡ ನಿರ್ಮಾಣದ ಭೂಮಿಪೂಜೆ  ನೆರವೇರಿಸಲು ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಆಗಮಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT