ಸಂಗ್ರಹ ಚಿತ್ರ 
ದೇಶ

ಅರಬ್ಬೀ ಸಮುದ್ರದಲ್ಲಿ ಏಳುತ್ತಿದೆ ಮತ್ತೊಂದು ಚಂಡಮಾರುತ: ಮಹಾರಾಷ್ಟ್ರ, ಗುಜರಾತ್ ಕರಾವಳಿಯಲ್ಲಿ ರೆಡ್ ಅಲರ್ಟ್!

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ. 

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ. 

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ಅದು ಮುಂದಿನ 36 ತಾಸುಗಳಲ್ಲಿ ಚಂಡಮಾರುತ ಸ್ವರೂಪ ಪಡೆಯುವ ಎಲ್ಲಾ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಜೂನ್.4ರಂದು ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿಗೆ ಈ ಚಂಡಮಾರುತ ಅಪ್ಪಳಿಸುವ ಸಂಭವವಿದೆ. ಅದರ ಪ್ರಬಾವದಿಂದ ಕರಾವಳಿ ಕರ್ನಾಟಕ, ಕೇರಳ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ. ವಾಯುಭಾರ ಕುಸಿತ ಒಂದು ಪ್ರಬಲ ಚಂಡಮಾರುತವಾಗಿ ಬದಲಾಗುವ ಪರಿಸ್ಥಿತಿ ಅನುಕೂಲಕರವಾಗಿದೆ. 

ಒಂದು ವೇಳೆ ಚಂಡಮಾರುತ ಸೃಷ್ಟಿಯಾದರೆ ಅದಕ್ಕೆ ನಿಸರ್ಗ ಎಂಬ ಹೆಸರನ್ನು ಪಡೆದುಕೊಳ್ಳಲಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT