ಸಂಗ್ರಹ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುದಾಣದ ಮೇಲೆ ದಾಳಿ, ಜೆಇಎಂ ಉಗ್ರ ಸಂಘಟನೆಗೆ ಸೇರಿದ 6 ಶಂಕಿತರ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮಾದಕ ವಸ್ತು ಭಯೋತ್ಪಾದನೆ ಅಡಗುದಾಣದ ಮೇಲೆ ಪೊಲೀಸರು ದಾಳಿ ಮಾಡಿದ್ದು, ಜೈಷ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ 6 ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

ಬದ್ಗಾಮ್: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮಾದಕ ವಸ್ತು ಭಯೋತ್ಪಾದನೆ ಅಡಗುದಾಣದ ಮೇಲೆ ಪೊಲೀಸರು ದಾಳಿ ಮಾಡಿದ್ದು, ಜೈಷ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ 6 ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

ಬದ್ಗಾಮ್ ಪೊಲೀಸರು ಈ ದಾಳಿ ನಡೆಸಿದ್ದು, ದಾಳಿ ವೇಳೆ ಆರು ಶಂಕಿತ ಉಗ್ರರು ಮತ್ತು ಅವರಿಂದ ಒಂದು ಪಿಸ್ತೂಲು 4 ಬುಲೆಟ್ ಗಳು, ಒಂದು ಮ್ಯಾಗಜಿನ್, 1.55 ಲಕ್ಷ ರೂ ನಗದು ಮತ್ತು 1 ಕೆಜಿ ಮಾದಕವಸ್ತುವನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೂಡ ಟ್ವೀಟ್ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಪಾಕಿಸ್ತಾನ ಗಡಿಯಿಂದ ಭಾರತದ ಗಡಿಯೊಳಗೆ ಒಳ ನುಸುಳುತ್ತಿದ್ದ 3 ಮಂದಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರದೊಂದಿಗೆ ಒಳ ನುಸುಳುತ್ತಿದ್ದರು. ಇದನ್ನು ಗಮನಿಸಿದ್ದ ಸೇನೆ ನೌಶೇರಾ ಸೆಕ್ಟರ್ ನಲ್ಲಿ ಹೊಡೆದುರುಳಿಸಿತ್ತು. ಇನ್ನು ಸೇನೆ ಕೂಡ ನಿನ್ನೆ ಪಿಒಕೆಯಲ್ಲಿನ ಉಗ್ರ ಶಬಿರಗಳು  ತುಂಬಿದ್ದು, ಉಗ್ರರು ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪಾಕ್ ಸೇನೆಯ ಬೆಂಬಲವಿದ್ದು, ಇದೇ ಕಾರಣಕ್ಕೆ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡತ್ತಿದೆ ಎಂದು ಆರೋಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT