ಸಂಗ್ರಹ ಚಿತ್ರ 
ದೇಶ

ನವದೆಹಲಿ: ಐಸಿಎಂಆರ್ ವಿಜ್ಞಾನಿ ಮತ್ತು ಸಿಆರ್ ಪಿಎಫ್ ಅಧಿಕಾರಿಗೂ ತಗುಲಿದ ಕೊರೋನಾ ಸೋಂಕು!

ಎರಡು ವಾರಗಳ ಹಿಂದೆಯಷ್ಟೇ ಮುಂಬೈನಿಂದ ನವದೆಹಲಿಗೆ ವಾಪಸ್ಸಾದ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯ ಹಿರಿಯ ವಿಜ್ಞಾನಿಯಲ್ಲಿ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

ನವದೆಹಲಿ: ಎರಡು ವಾರಗಳ ಹಿಂದೆಯಷ್ಟೇ ಮುಂಬೈನಿಂದ ನವದೆಹಲಿಗೆ ವಾಪಸ್ಸಾದ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯ ಹಿರಿಯ ವಿಜ್ಞಾನಿಯಲ್ಲಿ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

ಮುಂಬೈಗೆ ತೆರಳಿದ್ದ ಹಿರಿಯ ವಿಜ್ಞಾನಿಯೊಬ್ಬರು ಇತ್ತೀಚಿಗಷ್ಟೇ ನವದೆಹಲಿಗೆ ವಾಪಸ್ಸಾಗಿದ್ದರು. ಈ ವೇಳೆ ಕೊರೊನಾ ವೈರಸ್ ಸೋಂಕಿತ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ ಸೋಂಕು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯ ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಮುಂದಿನ ಎರಡು ದಿನಗಳ ಕಾಲ ಎಲ್ಲ ಸಿಬ್ಬಂದಿಗೆ ಪ್ರವೇಶಕ್ಕೆ ಅವಕಾಶವನ್ನು ನಿರ್ಬಂಧಿಸಲಾಗಿದೆ.

ನವದೆಹಲಿಯ ಐಸಿಎಂಆರ್ ಕಟ್ಟಡವನ್ನು ಸ್ಯಾನಿಟೈಸ್ ಮಾಡಲಾಗಿದ್ದು ಎಲ್ಲ ಸಿಬ್ಬಂದಿಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ವೈರಸ್ ಸಂಬಂಧಿತ ಔಷಧಿ ಸಂಶೋಧನೆಗೆ ಸಂಬಂಧಿಸಿದ ಕೆಲವು ಅಗತ್ಯ ಸಿಬ್ಬಂದಿಗೆ ಮಾತ್ರ ಸೋಮವಾರ ಐಸಿಎಂಆರ್ ಕಟ್ಟಡದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.

ಐಸಿಎಂಆರ್ ಕಚೇರಿಗೆ ತೆರಳದೇ ವರ್ಕ್ ಫ್ರಾಮ್ ಹೋಮ್ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಕೊರೊನಾ ವೈರಸ್ ಗೆ ಸಂಬಂಧಿತ ಸಂಶೋಧನಾ ಸಿಬ್ಬಂದಿಗೆ ಅನಿವಾರ್ಯವಿದ್ದಲ್ಲಿ ಮಾತ್ರ ಕಚೇರಿಗೆ ಆಗಮಿಸಬೇಕು. ಇಲ್ಲದಿದ್ದಲ್ಲಿ ಎಲ್ಲರೂ ಮನೆಯಿಂದಲೇ ವರ್ಕ್ ಮಾಡುವಂತೆ ಸೂಚಿಸಲಾಗಿದೆ.

ಇದೇ ವೇಳೆ ದೆಹಲಿಯ ಸಿಆರ್ ಪಿಎಫ್ ಅಧಿಕಾರಿಗೂ  ಸೋಂಕು ತಗುಲಿರುವುದು ದೃಢ ಪಟ್ಟಿದೆ. ಅಧಿಕಾರಿಯನ್ನೂ ಪ್ರತ್ಯೇಕವಾಗಿರಿಸಲಾಗಿದ್ದು ಎಲ್ಲಾ ನಿಯಮಗಳನ್ನು ಪಾಲಿಸಲಾಗುತ್ತಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT