ಮನು ಶರ್ಮಾ 
ದೇಶ

ಜೆಸ್ಸಿಕಾ ಲಾಲ್ ಕೊಲೆ ಆರೋಪಿ ಮನು ಶರ್ಮಾ ಜೈಲಿನಿಂದ ರಿಲೀಸ್!

ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದ ಅಪರಾಧಿ, ಜೀವಾವಧಿ ಶಿಕ್ಷೆಗೆ ತುತ್ತಾಗಿರುವ ಮನು ಶರ್ಮಾ ರನ್ನು ಶಿಕ್ಷೆ ಅವಧಿಗೂ ಮುನ್ನ  ಬಿಡುಗಡೆ ಮಾಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅನುಮೋದನೆ ನೀಡಿದ್ದಾರೆ.

ನವದೆಹಲಿ:  ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದ ಅಪರಾಧಿ, ಜೀವಾವಧಿ ಶಿಕ್ಷೆಗೆ ತುತ್ತಾಗಿರುವ ಮನು ಶರ್ಮಾ ರನ್ನು ಶಿಕ್ಷೆ ಅವಧಿಗೂ ಮುನ್ನ  ಬಿಡುಗಡೆ ಮಾಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅನುಮೋದನೆ ನೀಡಿದ್ದಾರೆ.

ದೆಹಲಿ ಸರ್ಕಾರದ ಅಧೀನದಲ್ಲಿರುವ ದೆಹಲಿ ಸೆಂಟೆನ್ಸ್ ರಿವ್ಯೂ ಮಂಡಳಿಯು ಕಳೆದ ತಿಂಗಳು ಶರ್ಮಾ ಬಿಡುಗಡೆಗಾಗಿ ಶಿಫಾರಸು ಮಾಡಿತ್ತು. ಮೇ 11 ರಂದು ದೆಹಲಿ ಗೃಹ ಸಚಿವ ಸತ್ಯೇಂದರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಎಸ್‌ಆರ್‌ಬಿ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಕೇಂದ್ರ ಸಚಿವ ವೆನೋದ್ ಶರ್ಮಾ ಅವರ ಪುತ್ರ ಮನು ಶರ್ಮಾ  1999 ರಲ್ಲಿ ಜೆಸ್ಸಿಕಾ ಲಾಲ್ ಹತ್ಯೆ ನಡೆಸಿದ್ದಕ್ಕಾಗಿ 2006 ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು.

ಇದಕ್ಕೆ ಮುನ್ನ ವಿಚಾರಣಾ ನ್ಯಾಯಾಲಯ ಆತನನ್ನು ಖುಲಾಸೆಗೊಳಿಸಿತ್ತು, ಆದರೆ ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ವಜಾಗೊಳಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದಕ್ಕೆ ಸಂಬಂಧ ಸುಪ್ರೀಂ ಕೋರ್ಟ್ ಸಹ ಜೀವಾವಧಿ ಶಿಕ್ಷೆಯನ್ನು ಏಪ್ರಿಲ್ 2010 ರಲ್ಲಿ ಎತ್ತಿಹಿಡಿದಿದೆ.

ಏಪ್ರಿಲ್ 30, 1999 ರ ರಾತ್ರಿ ದಕ್ಷಿಣ ದೆಹಲಿಯ ಮೆಹ್ರೌಲಿ ಪ್ರದೇಶದ ಕುತುಬ್ ಕೊಲೊನೇಡ್ ನಲ್ಲಿ  ಸಮಾಜವಾದಿ ಬಿನಾ ರಮಣಿ ಒಡೆತನದ ಟೆಮರಿಂಡ್ ಕೋರ್ಟ್ ರೆಸ್ಟೋರೆಂಟ್ ನಲ್ಲಿ  ಜೆಸ್ಸಿಕಾ ಲಾಲ್ ಮದ್ಯ ಸೇವನೆಗೆ ನಿರಾಕರಿಸಿದ್ದಕ್ಕಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT