ಆದೇಶ್ ಕುಮಾರ್ ಗುಪ್ತಾ 
ದೇಶ

ದೆಹಲಿ ಬಿಜೆಪಿ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ನೇಮಕ

ದೆಹಲಿ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ಅವರನ್ನು ಹಾಗೂ ಚತ್ತೀಸ್‌ಗಢ ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಕೇಂದ್ರ ಮಾಜಿ ಕೇಂದ್ರ ಸಚಿವ ವಿಷ್ಣು ದಿಯೋ ಸಾಯ್‍ ಅವರನ್ನುನೇಮಕ ಮಾಡಲಾಗಿದೆ.

ನವದೆಹಲಿ: ದೆಹಲಿ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ಅವರನ್ನು ಹಾಗೂ ಚತ್ತೀಸ್‌ಗಢ ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಕೇಂದ್ರ ಮಾಜಿ ಕೇಂದ್ರ ಸಚಿವ ವಿಷ್ಣು ದಿಯೋ ಸಾಯ್‍ ಅವರನ್ನುನೇಮಕ ಮಾಡಲಾಗಿದೆ.

ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಮಂಗಳವಾರ ಈ ಎರಡು ನೇಮಕಗಳನ್ನು ಮಾಡಿ ಆದೇಶಿಸಿದ್ದಾರೆ.

ದೆಹಲಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಟ ಮತ್ತು ಶಾಸಕ ಮನೋಜ್ ತಿವಾರಿ ಅವರ ಬದಲಿಗೆ ಉತ್ತರ ದೆಹಲಿ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಗುಪ್ತಾ ನೇಮಕಗೊಂಡಿದ್ದಾರೆ. 

ಮಣಿಪುರ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಪ್ರೊ. ಎಸ್.ಟಿಕೇಂದ್ರ ಸಿಂಗ್‍ ಅವರನ್ನು ನಡ್ಡಾ ನೇಮಕ ಮಾಡಿದ್ದಾರೆ. 

ಚತ್ತೀಸ್‍ ಗಢ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿಷ್ಣು ದಿಯೋ ಸಾಯ್‍ ಅವರು 16ನೇ ಲೋಕಸಭೆಯಲ್ಲಿ ರಾಯಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. .ಈ ನೇಮಕಗಳು ತಕ್ಷಣದಿಂದ ಜಾರಿಗೆ ಬರಲಿವೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT