ರಾಮ್ ವಿಲಾಸ್ ಪಾಸ್ವನ್ 
ದೇಶ

"ಒನ್ ನೇಷನ್ ಒನ್ ರೇಷನ್ ಕಾರ್ಡ್" ಮುಂದಿನ ವರ್ಷ ದೇಶಾದ್ಯಂತ ಜಾರಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ "ಒಂದು ರಾಷ್ಟ್ರ ಒಂದು ಪಡಿತರ ಚೀಟಿ" ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ 20 ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮುಂದಿನ ವರ್ಷ ಮಾರ್ಚ್‌ 31ರೊಳಗೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಈ ಯೋಜನೆಯನ್ನು ಜಾರಿಗೆ  ತರುವುದು ಕೇಂದ್ರ ಸರ್ಕಾರದ ಗುರಿಯಾಗಿದೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ "ಒಂದು ರಾಷ್ಟ್ರ ಒಂದು ಪಡಿತರ ಚೀಟಿ" ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ 20 ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮುಂದಿನ ವರ್ಷ ಮಾರ್ಚ್‌ 31ರೊಳಗೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಈ ಯೋಜನೆಯನ್ನು ಜಾರಿಗೆ  ತರುವುದು ಕೇಂದ್ರ ಸರ್ಕಾರದ ಗುರಿಯಾಗಿದೆ.

ಒಡಿಶಾ, ಸಿಕ್ಕಿಂ ಮತ್ತು ಮಿಜೋರಾಂ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಗೆ ಸೇರ್ಪಡೆಯಾದ ನಂತರ, ಇದೀಗ 20 ರಾಜ್ಯಗಳು ಐಎಂಪಿಡಿಎಸ್ (ಇಂಟಿಗ್ರೇಟೆಡ್ ಮ್ಯಾನೇಜ್ಮೆಂಟ್ ಆಫ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್) ಗೆ ಸಂಪರ್ಕ ಹೊಂದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು  ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸೋಮವಾರ ಹೇಳಿದ್ದಾರೆ.

"ನಾನು ಮೊದಲೇ ಘೋಷಿಸಿದಂತೆ, ಒಡಿಶಾ, ಸಿಕ್ಕಿಂ ಮತ್ತು ಮಿಜೋರಾಂ - ಇನ್ನೂ ಮೂರು ರಾಜ್ಯಗಳನ್ನು ಸರ್ಕಾರದ ಮಹತ್ವಾಕಾಂಕ್ಷೆಯ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಗೆ ಸೇರಿಸಲಾಗಿದೆ. ಇದರೊಂದಿಗೆ 20 ರಾಜ್ಯಗಳು ಐಎಂಪಿಡಿಎಸ್ ಯೋಜನೆಗೆ ಸೇರಿವೆ," ಎಂದು ಕೇಂದ್ರ ಸಚಿವರು ಟ್ವಿಟ್‌  ಮಾಡಿದ್ದರು.

"ಒನ್ ನೇಷನ್ ಒನ್ ರೇಷನ್ ಕಾರ್ಡ್ " ಯೋಜನೆಯನ್ನು 2021ರ ಮಾರ್ಚ್ 31 ರೊಳಗೆ ದೇಶಾದ್ಯಂತ ಜಾರಿಗೆ ತರಲಾಗುವುದು. ಈ ನಿಟ್ಟಿನಲ್ಲಿ 2020ರ ಆಗಸ್ಟ್ 1 ರೊಳಗೆ ಉತ್ತರಾಖಂಡ್, ನಾಗಾಲ್ಯಾಂಡ್ ಮತ್ತು ಮಣಿಪುರವನ್ನು ಸಂಪರ್ಕಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ," ಎಂದು  ಮತ್ತೊಂದು ಟ್ವೀಟ್‌ನಲ್ಲಿ ಪಾಸ್ವಾನ್‌ ತಿಳಿಸಿದ್ದಾರೆ.

2021ರ ಮಾರ್ಚ್ 31 ರೊಳಗೆ ಈ ಯೋಜನೆ ಜಾರಿಗೆ ಬಂದ ನಂತರ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಯಾವುದೇ ಫಲಾನುಭವಿಗಳು ದೇಶದಲ್ಲಿ ಎಲ್ಲಿಯಾದರೂ ಪಡಿತರವನ್ನು ಪಡೆಯಬಹುದು. ಎನ್‌ಎಫ್‌ಎಸ್‌ಎ ಅಡಿಯಲ್ಲಿ  ದೇಶದಲ್ಲಿ ಸುಮಾರು 81 ಕೋಟಿ ಜನರಿಗೆ ಅಗ್ಗದ ದರದಲ್ಲಿ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ.

ಕೆಜಿ ಗೋಧಿಗೆ 2 ರೂ. ಮತ್ತು ಕೆ.ಜಿ ಅಕ್ಕಿಗೆ 3 ರೂ. ನೀಡಲಾಗುತ್ತದೆ. ಕೊರೊನಾ ವೈರಸ್‌ ಸಾಂಕ್ರಾಮಿಕ ರೋಗದ ಸಮಯದಲ್ಲಿ ಕೇಂದ್ರ ಸರ್ಕಾರವು ಒಂದು ತಿಂಗಳಿಗೆ ಪ್ರತಿ ಪಿಡಿಎಸ್ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಅಥವಾ ಗೋಧಿ ಮತ್ತು ಒಂದು ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡುತ್ತದೆ.  ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆಯಡಿ ಏಪ್ರಿಲ್‌ನಲ್ಲಿ ಪ್ರಾರಂಭವಾದಾಗಿನಿಂದ ಇದು ಮೂರು ತಿಂಗಳವರೆಗೆ ಮುಂದುವರಿಯುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ

'ನಾನು ಯಂಗ್ ಹೃತಿಕ್ ರೋಷನ್ ತರಹ ಕಾಣುತ್ತೇನೆ ಅಂತ...': ಕಂಗನಾಗೆ CJP ವಕ್ತಾರ ಸೌರವ್ ದಾಸ್ ತಪರಾಕಿ!

ಕಾವೇರಿ ಕಿಚ್ಚಿನ ಮಧ್ಯೆ ಮಂಡ್ಯದಲ್ಲಿ ಘೋರ ದುರಂತ: ರೈತ ದಂಪತಿ ನೇಣಿಗೆ ಶರಣು; ಸರ್ಕಾರ ಸಮಸ್ಯೆ ಪರಿಹರಿಸಬೇಕು - ಬಿಜೆಪಿ ಆಗ್ರಹ

30 ದಿನ ಜೈಲು ಶಿಕ್ಷೆ ಆದ್ರೆ ಸಿಎಂ, ಪ್ರಧಾನಿ ಹುದ್ದೆ ಕಳೆದುಕೊಳ್ಳಬೇಕೇ?; ಮಹತ್ವದ ಮಸೂದೆ ಪರಿಶೀಲನೆಗೆ ಸಂಸತ್ ಸಮಿತಿಗೆ ಮತ್ತಷ್ಟು ಕಾಲಾವಕಾಶ