ಸಂಜಯ್ ಸಿಂಗ್ 
ದೇಶ

ಎಂಪಿ ಕೋಟಾದಲ್ಲಿ 33 ವಲಸಿಗರಿಗೆ ಊರು ತಲುಪಲು ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ ಆಮ್ ಆದ್ಮಿಯ ಸಂಜಯ್ ಸಿಂಗ್

ಸಂಸದರ ಕೋಟಾದ ಅಡಿ 34 ವಿಮಾನ ಟಿಕೆಟ್ ಗಳನ್ನು ವಲಸಿಗ ಕಾರ್ಮಿಕರಿಗೆ ಊರು ತಲುಪಲು ಕಾಯ್ದಿರಿಸುವ ವ್ಯವಸ್ಥೆಯನ್ನು ಮಾಡಲು ಆಮ್ ಆದ್ಮಿಯ ಸಂಸದ ಸಂಜಯ್ ಸಿಂಗ್ ಮುಂದಾಗಿದ್ದಾರೆ. 

ನವದೆಹಲಿ: ಸಂಸದರ ಕೋಟಾದ ಅಡಿ 34 ವಿಮಾನ ಟಿಕೆಟ್ ಗಳನ್ನು ವಲಸಿಗ ಕಾರ್ಮಿಕರಿಗೆ ಊರು ತಲುಪಲು ಕಾಯ್ದಿರಿಸುವ ವ್ಯವಸ್ಥೆಯನ್ನು ಮಾಡಲು ಆಮ್ ಆದ್ಮಿಯ ಸಂಸದ ಸಂಜಯ್ ಸಿಂಗ್ ಮುಂದಾಗಿದ್ದಾರೆ. 

ದೆಹಲಿಯಿಂದ ಪಾಟ್ನಾಗೆ 34 ವಿಮಾನ ಟಿಕೆಟ್ ಗಳನ್ನು ಬುಕ್ ಮಾಡಲು ಸಂಜಯ್ ಸಿಂಗ್ ನಿರ್ಧರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 33 ವಲಸಿಗ ಕಾರ್ಮಿಕರನ್ನು ಕರೆದುಕೊಂಡು ತಾವೂ ಸಹ ಪಾಟ್ನಾಗೆ ತೆರಳಲಿದ್ದಾರೆ ಸಂಜಯ್ ಸಿಂಗ್. 

ಓರ್ವ ಸಂಸದನಿಗೆ ದೇಶಿಯ ವಿಮಾನಗಳಲ್ಲಿ ಸಂಚರಿಸಲು ವಾರ್ಷಿಕ 34 ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಗಳನ್ನು ಬಳಕೆ ಮಾಡಲು ಅವಕಾಶವಿದೆ. ಸಂಜಯ್ ಸಿಂಗ್ ಅವರ ಈ ನಿರ್ಧಾರವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ. ಸಂಜಯ್ ಸಿಂಗ್ ಅವರ ಈ ನಿರ್ಧಾರ ಎಲ್ಲರಿಗೂ ಪ್ರೇರಕವಾದದ್ದು, ದೇವರು ಅನುಕೂಲ ನೀಡಿದ್ದಾನೆ ಎಂದರೆ ಅದನ್ನು ಅಗತ್ಯವಿರುವವರಿಗೆ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಅವರ ಜವಾಬ್ದಾರಿಯಾಗಿರುತ್ತದೆ. ಸಂಜಯ್ ಸಿಂಗ್ ಅಭಿನಂದನೆಗೆ ಅರ್ಹರು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT