ರವೀಶ್ ಕುಮಾರ್ 
ದೇಶ

ಫಿನ್ಲೆಂಡ್‌ನ ಮುಂದಿನ ಭಾರತದ ರಾಯಭಾರಿಯಾಗಿ ರವೀಶ್ ಕುಮಾರ್ ನೇಮಕ

ಮಹತ್ವದ ರಾಜತಾಂತ್ರಿಕ ಮತ್ತು ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ರವೀಶ್ ಕುಮಾರ್ ಅವರನ್ನು ಫಿನ್ಲೆಂಡ್‌ಗೆ ಭಾರತದ ಮುಂದಿನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ನವದೆಹಲಿ: ಮಹತ್ವದ ರಾಜತಾಂತ್ರಿಕ ಮತ್ತು ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ರವೀಶ್ ಕುಮಾರ್ ಅವರನ್ನು ಫಿನ್ಲೆಂಡ್‌ಗೆ ಭಾರತದ ಮುಂದಿನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

1995 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿದ್ದ ರವೀಶ್ ಕುಮಾರ್ಅವರು ಜುಲೈ 2017 ರಿಂದ 2020 ರ ಏಪ್ರಿಲ್ ವರೆಗೆ ಎಂಇಎ ವಕ್ತಾರರಾಗಿ ಸೇವೆ ಸಲ್ಲಿಸಿದರು, ಈ ಸಂದರ್ಭದಲ್ಲಿ ಅವರು ಬಾಲಕೋಟ್ ದಾಳಿ, , ಜಮ್ಮು ಮತ್ತು ಕಾಶ್ಮೀರದ ಕೇಂದ್ರಡಳಿತ ಪ್ರದೇಶ ಘೋಷಣೆ ಹಲವಾರು ಸೂಕ್ಷ್ಮ ವಿಷಯಗಳ ಬಗ್ಗೆ ಭಾರತದ ನಿಲುವನ್ನು ಚತುರತೆಯಿಂದ ವ್ಯಕ್ತಪಡಿಸಿದ್ದರು. 

ರವೀಶ್ ಕುಮಾರ್ ಎಂಇಎ ವಕ್ತಾರರಾಗುವ ಮೊದಲು ಫ್ರಾಂಕ್‌ಫರ್ಟ್‌ನಲ್ಲಿ ಭಾರತದ ಕಾನ್ಸುಲ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.ತಮ್ಮ ವೃತ್ತಿಜೀವನವನ್ನು ಜಕಾರ್ತಾದ ಇಂಡಿಯನ್ ಮಿಷನ್‌ನಲ್ಲಿ ಪ್ರಾರಂಭಿಸಿದ್ದ ಅವರು ನಂತರ ಥಿಂಪು ಮತ್ತು ಲಂಡನ್‌ನಲ್ಲಿ ಸಹ ಸೇವೆ ಸಲ್ಲಿಸಿದ್ದರು.

ಸುಮಾರು 25 ವರ್ಷಗಳ ವೃತ್ತಿಜೀವನದಲ್ಲಿ, ರವೀಶ್ ಕುಮಾರ್ ದೆಹಲಿಯ ಎಂಇಎ ಕೇಂದ್ರ ಕಚೇರಿಯಲ್ಲಿದ್ದ ವೇಳೆ ಪೂರ್ವ ಏಷ್ಯಾದ ಮರ್ಜಿಯನ್ನೂ ನೊಡಿಕೊಂಡಿದ್ದರು. ಜಕಾರ್ತಾದ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಅವರು ಆಗಸ್ಟ್ 2013 ರಿಂದ ಜುಲೈ 2017 ರವರೆಗೆ ಫ್ರಾಂಕ್‌ಫರ್ಟ್‌ನಲ್ಲಿ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡರು.

ಫಿನ್ಲೆಂಡ್ನಲ್ಲಿ, ಅವರು ವಾಣಿ ರಾವ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ.ಯುರೋಪಿನಲ್ಲಿ ಫಿನ್ಲ್ಯಾಂಡ್ ಭಾರತಕ್ಕೆ ಒಂದು ಪ್ರಮುಖ ಮಿತ್ರನಾಗಿದ್ದು ಕಳೆದ ಕೆಲವು ವರ್ಷಗಳಿಂದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಪ್ರಗತಿಯಲ್ಲಿದೆ.

ಐಟಿ, ಆರೋಗ್ಯ ರಕ್ಷಣೆ, ಆತಿಥ್ಯ ಮತ್ತು ವಾಹನ ಕ್ಷೇತ್ರಗಳಲ್ಲಿ ಸುಮಾರು 35 ಭಾರತೀಯ ಕಂಪನಿಗಳು ಫಿನ್‌ಲ್ಯಾಂಡ್‌ನಲ್ಲಿ ಹೂಡಿಕೆ ಮಾಡಿದ್ದರೆ, 100 ಕ್ಕೂ ಹೆಚ್ಚು ಫಿನ್ನಿಷ್ ಕಂಪನಿಗಳು ಭಾರತದಲ್ಲಿ ಇಂಧನ, ಜವಳಿ, ವಿದ್ಯುತ್ ಸ್ಥಾವರಗಳು ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT