ಕಾಂಗ್ರೆಸ್ 
ದೇಶ

ಗುಜರಾತ್: ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಇಬ್ಬರು ಕೈ ಶಾಸಕರ ರಾಜೀನಾಮೆ

ಜೂನ್ 19 ರ ರಾಜ್ಯಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಗುಜರಾತ್ ಕಾಂಗ್ರೆಸ್ ನಲ್ಲಿ ಬೇಗುದಿ ಪ್ರಾರಂಬವಾಗಿದೆ. ಚುನಾವಣೆಗೆ ಮುನ್ನ ಇಬ್ಬರು ಗುಜರಾತ್ ಕಾಂಗ್ರೆಸ್ ಶಾಸಕರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. 

ಅಹಮದಾಬಾದ್: ಜೂನ್ 19 ರ ರಾಜ್ಯಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಗುಜರಾತ್ ಕಾಂಗ್ರೆಸ್ ನಲ್ಲಿ ಬೇಗುದಿ ಪ್ರಾರಂಬವಾಗಿದೆ. ಚುನಾವಣೆಗೆ ಮುನ್ನ ಇಬ್ಬರು ಗುಜರಾತ್ ಕಾಂಗ್ರೆಸ್ ಶಾಸಕರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. 

ಕಾಂಗ್ರೆಸ್ ಶಾಸಕರಾದ ಅಕ್ಷಯ್ ಪಟೇಲ್ ಮತ್ತು ಜಿತು ಚೌಧರಿ ಗುಜರಾತ್ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರನ್ನು ಭೇಟಿಯಾಗಿ  ರಾಜೀನಾಮೆ ಪತ್ರ ಹಸ್ತಾಂತರಿಸಿದ್ದಾರೆ.

"ನಾನು ಅವರ ರಾಜೀನಾಮೆ ಅಂಗೀಕರಿಸಿದ್ದೇನೆ. ಅವರೀಗ ಶಾಸಕರಾಗಿ ಮುಂದುವರಿದಿಲ್ಲ"ತ್ರಿವೇದಿ ಗಾಂಧಿನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಪಟೇಲ್ ವಡೋದರಾದ ಕರ್ಜನ್ ಸ್ಥಾನವನ್ನು ಪ್ರತಿನಿಧಿಸಿದರೆ, ಚೌಧರಿ ವಲ್ಸಾದ್‌ನ ಕಪ್ರದ ಸ್ಥಾನದಿಂದ ಗೆದ್ದಿದ್ದರು.

ಇನ್ನು ಇದಕ್ಕೂ ಮೊದಲು ಮಾರ್ಚ್‌ನಲ್ಲಿಯೂ ಕಾಂಗ್ರೆಸ್ಸಿನ ಐವರು ಶಾಸಕರು ರಾಜೀನಾಮೆ ನೀಡಿದ್ದರು. 182 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ ಆಡಳಿತಾರೂಢ ಬಿಜೆಪಿ 103 ಶಾಸಕರು ಮತ್ತು ವಿರೋಧ ಪಕ್ಷ ಕಾಂಂಗ್ರೆಸ್ ಪ್ರಸ್ತುತ 66 ಶಾಸಕರನ್ನು ಹೊಂದಿದೆ. ಗುಜರಾತಿನಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು  ಬಿಜೆಪಿಯಿಂದ ಮೂವರು ಮತ್ತು ಕಾಂಗ್ರೆಸ್ ನಿಂದ ಇಬ್ಬರು ಅಭ್ಯರ್ಥಿಗಳು  ಕಣದಲ್ಲಿದ್ದಾರೆ. 

ಅಭಯ್ ಭಾರದ್ವಾಜ್, ರಮಿಲಾ ಬಾರಾ ಮತ್ತು ನರ್ಹಾರಿ ಅಮೀನ್ ಅವರನ್ನು ಬಿಜೆಪಿ ಕಣಕ್ಕಿಳಿಸಿದರೆ, ಕಾಂಗ್ರೆಸ್ ಹಿರಿಯ ನಾಯಕರಾದ ಶಕ್ತಿಸಿಂಹ್  ಗೋಹಿಲ್ ಮತ್ತು ಭರತ್ ಸಿಂಹ್ ಸೋಲಂಕಿ ಅವರನ್ನು ಚುನಾವಣೆಗೆ ಕಣಕ್ಕಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT