ವರ್ಚುವಲ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮೊರಿಸನ್ ಮತ್ತು ಪ್ರಧಾನಿ ಮೋದಿ 
ದೇಶ

ಕೋವಿಡ್-19 ಬಿಕ್ಕಟ್ಟನ್ನು ಅವಕಾಶವೆಂದು ನೋಡಿದ್ದೇವೆ: ಆಸ್ಟ್ರೇಲಿಯಾ ಪ್ರಧಾನಿ ಜೊತೆ ವರ್ಚುವಲ್ ಶೃಂಗಸಭೆಯಲ್ಲಿ ಮೋದಿ

ಕೋವಿಡ್ -19 ಬಿಕ್ಕಟ್ಟನ್ನು ಒಂದು ಅವಕಾಶವಾಗಿ ನೋಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಭಾರತದಲ್ಲಿ, ಕೋವಿಡ್-19 ನಂತರ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಸಮಗ್ರ ಸುಧಾರಣೆಯ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.ಶೀಘ್ರದಲ್ಲೇ ಅದರ ಫಲಿತಾಂಶವು ತಳಮಟ್ಟದಿಂದ ಕಂಡುಬರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಕೋವಿಡ್ -19 ಬಿಕ್ಕಟ್ಟನ್ನು ಒಂದು ಅವಕಾಶವಾಗಿ ನೋಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಭಾರತದಲ್ಲಿ, ಕೋವಿಡ್-19 ನಂತರ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಸಮಗ್ರ ಸುಧಾರಣೆಯ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.ಶೀಘ್ರದಲ್ಲೇ ಅದರ ಫಲಿತಾಂಶವು ತಳಮಟ್ಟದಿಂದ ಕಂಡುಬರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರೊಂದಿಗೆ ನಡೆಸಿದ ವರ್ಚುವಲ್ ಶೃಂಗಸಭೆಯಲ್ಲಿ ಕೋವಿಡ್-19, ಭಾರತದ ಸ್ಥಿತಿಗತಿ, ಭಾರತ-ಆಸ್ಟ್ರೇಲಿಯಾ ಸಂಬಂಧಗಳ ಕುರಿತು ಮಾತನಾಡಿದರು.

ಮಾತು ಆರಂಭಿಸಿದ ಮೋದಿಯವರು, ಸಮಸ್ತ ಭಾರತೀಯರ ಪರವಾಗಿ ನಾನು ಆಸ್ಟ್ರೇಲಿಯಾದಲ್ಲಿ ಕೋವಿಡ್-19ಗೆ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇನೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸಂಬಂಧ ಸುಧಾರಿಸಲು ಇದು ಸರಿಯಾದ ಸಮಯ. ನಮ್ಮ ಸ್ನೇಹವನ್ನು ಬಲಪಡಿಸಲು ಸಾಕಷ್ಟು ಅವಕಾಶಗಳಿವೆ. ನಮ್ಮ ಸಾಮರ್ಥ್ಯಗಳನ್ನು ವಾಸ್ತವವಾಗಿ ಬದಲಾಯಿಸಲು ಕೂಡ ನಮಗೆ ಸಾಕಷ್ಟು ಸವಾಲುಗಳನ್ನು ತಂದೊಡ್ಡಿದೆ. ಇಲ್ಲಿ ನಮ್ಮ ಸಂಬಂಧ ಸ್ಥಿರತೆಗೆ ಹೇಗೆ ಕಾರಣವಾಗುತ್ತದೆ ಎಂಬುದು ಮುಖ್ಯವಾಗುತ್ತದೆ ಎಂದರು.

ಆಸ್ಟ್ರೇಲಿಯಾದೊಂದಿಗಿನ ತನ್ನ ಸಂಬಂಧವನ್ನು ಬಲಪಡಿಸಲು ಭಾರತ ಬದ್ಧವಾಗಿದ್ದು, ಇದು ನಮ್ಮ ಎರಡು ರಾಷ್ಟ್ರಗಳಿಗೆ ಮಾತ್ರವಲ್ಲದೆ ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಇಡೀ ಜಗತ್ತಿಗೆ ಮುಖ್ಯವಾಗಿದೆ ಎಂದು ಸಹ ಮೋದಿ ಹೇಳಿದರು.
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮೊರಿಸನ್ ಮಾತನಾಡಿ, ನೀವು ಭಾರತದೊಳಗೆ ಮಾತ್ರ ನಾಯಕತ್ವವನ್ನು ಹೊಂದಿಲ್ಲದೆ, ಜಿ20, ಇಂಡೊ-ಫೆಸಿಫಿಕ್ ಗಳಲ್ಲಿ ಸಹ ಪ್ರಭಾವಶಾಲಿಯಾಗಿದ್ದು ಈ ಕಠಿಣ ಸಮಯದಲ್ಲಿ ನೀವು ರಚನಾತ್ಮಕ, ಸಕಾರಾತ್ಮಕ, ಸ್ಥಿರತೆಯಿಂದ ವರ್ತಿಸಿದ್ದೀರಿ. ಮುಕ್ತ, ಅಂತರ್ಗತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಗೆ ನಾವು ಬದ್ಧರಾಗಿದ್ದು, ಮುಂದಿನ ವರ್ಷಗಳಲ್ಲಿ ಆ ಪ್ರದೇಶದಲ್ಲಿ ಭಾರತದ ಪಾತ್ರ ನಿರ್ಣಾಯಕವಾಗಿರುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT