ಸಿಎಂ ಅರವಿಂದ ಕೇಜ್ರಿವಾಲ್ 
ದೇಶ

ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಸಿಎಂ ಕೇಜ್ರಿವಾಲ್

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ. 

ನವದೆಹಲಿ: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೆಲ ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂಬ ಮಾಹಿತಿ ಬಂದಿದೆ. ಆಸ್ಪತ್ರೆಗಳಲ್ಲಿರುವ ಹಾಸಿಗೆಗಳನ್ನು ಬ್ಲಾಕ್ ಮಾರ್ಕೆಟ್ ಮಾಡುತ್ತಿರುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದಾರೆ.

ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗಳ ಇಂತಹ ವರ್ತನೆಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದು ಈ ಮೂಲಕ ಜನರಿಗೆ ಭರವಸೆಯನ್ನು ನೀಡುತ್ತಿದ್ದೇನೆ. ಕೆಲ ಖಾಸಗಿ ಆಸ್ಪತ್ರೆಗಳು ಸೋಂಕಿತರನ್ನು ದಾಖಲು ಮಾಡಿಕೊಳ್ಳಲು ದುಪ್ಪಟ್ಟು ಹಣ ಪಡೆಯುತ್ತಿರುವುದಾಗಿ ಹಾಗೂ ಕೆಲವು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವ ಮಾಹಿತಿಗಳು ಬಂದಿವೆ. ಇದು ನ್ಯಾಯಯುತವಲ್ಲ. ಇಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಪರೀಕ್ಷಾ ಸಾಮರ್ಥ್ಯದ ಕುರಿತು ಮಾತನಾಡಿರುವ ಅವರು, ದೇಶದ ನಡೆಯುತ್ತಿರುವ ಗರಿಷ್ಠ ಸಂಖ್ಯೆಯ ಪರೀಕ್ಷೆಗಳು ದೆಹಲಿಯಲ್ಲಿ ನಡೆಯುತ್ತಿವೆ. ಇಷ್ಟು ಸಂಖ್ಯೆಯಲ್ಲಿ ಯಾವುದೇ ರಾಜ್ಯ ಕೂಡ ಪರೀಕ್ಷೆ ನಡೆಸುತ್ತಿಲ್ಲ. ಲಕ್ಷಣ ಇಲ್ಲದ ಜನರು ಪರೀಕ್ಷೆ ಮಾಡಿಸಿಕೊಳ್ಳುವುದನ್ನು ನಿಯಂತ್ರಿಸಬೇಕಿದೆ. ಎಲ್ಲರಿಗೂ ಪರೀಕ್ಷೆ ಮಾಡುವುದು ಅಸಾಧ್ಯಕರ. ಪ್ರತೀಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಲು ಮುಂದಾದರೆ ವ್ಯವಸ್ಥೆ ಕುಸಿದು ಬೀಳಲಿದೆ. 

ಇದರಿಂದ ಲಕ್ಷಣ ಇರುವವರಿಗೆ ಪರೀಕ್ಷೆ ನಡೆಸಲು ಸಾಧ್ಯವಾಗದೇ ಹೋಗಬಹುದು. ಉಸಿರಾಟ ಸಮಸ್ಯೆ ಹಾಗೂ ಹೆಚ್ಚಿನ ಜ್ವರ ಇರುವವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದೆ. ಇಂತಹವರನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಹಾಗೂ ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸಬಾರದು ಎಂಬುದರ ಕುರಿತು ಶೀಘ್ರದಲ್ಲಿಯೇ ಆದೇಶ ಕೂಡ ಹೊರಡಿಸಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT