ಹಾರ್ದಿಕ್ ಪಟೇಲ್ 
ದೇಶ

ಪಕ್ಷಾಂತರಿ ಶಾಸಕರನ್ನು ಚಪ್ಪಲಿಯಿಂದ ಹೊಡೆಯಿರಿ: ಹಾರ್ದಿಕ್ ಪಟೇಲ್

ಪಕ್ಷಾಂತರ ಮಾಡಿದ ಶಾಸಕರನ್ನು ಸಾರ್ವಜನಿಕರು ಚಪ್ಪಲಿಗಳಿಂದ ಹೊಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಹೇಳಿದ್ದಾರೆ. ರಾಜ್ಯಸಭಾ ಚುನಾವಣೆಗೆ ಮುನ್ನ ಗುಜರಾತಿನಲ್ಲಿ ಕೆಲ ಶಾಸಕರು  ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂಬ ಮಾಧ್ಯಮ ವರದಿಗಳ ಕುರಿತು ಪಟೇಲ್ ಪ್ರತಿಕ್ರಯಿಸಿದ್ದಾರೆ.

ಅಹಮದಾಬಾದ್: ಪಕ್ಷಾಂತರ ಮಾಡಿದ ಶಾಸಕರನ್ನು ಸಾರ್ವಜನಿಕರು ಚಪ್ಪಲಿಗಳಿಂದ ಹೊಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಹೇಳಿದ್ದಾರೆ. ರಾಜ್ಯಸಭಾ ಚುನಾವಣೆಗೆ ಮುನ್ನ ಗುಜರಾತಿನಲ್ಲಿ ಕೆಲ ಶಾಸಕರು  ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂಬ ಮಾಧ್ಯಮ ವರದಿಗಳ ಕುರಿತು ಪಟೇಲ್ ಪ್ರತಿಕ್ರಯಿಸಿದ್ದಾರೆ.

"ಕಳೆದ ಒಂದು ತಿಂಗಳಲ್ಲಿ ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ. ಅವರು 140 ಕೋಟಿ ರೂ.ಗಳಿಂದ 150 ಕೋಟಿ ರೂ. ಖರ್ಚು ಮಾಡಿದ್ದಾರೆ. ಅವರು ಈ ಹಣವನ್ನು ವೆಂಟಿಲೇಟರ್‌ಗಳನ್ನು ಖರೀದಿಸಲು ಖರ್ಚು ಮಾಡಿದ್ದರೆ ನಾವು ಕೆಲವು ಜೀವಗಳನ್ನು ಉಳಿಸಬಹುದಿತ್ತು.

"ಹಣದ ದುರಾಸೆಯಿಂದಾಗಿ ಸಾಮಾನ್ಯ ಜನಕ್ಕೆ ಮೋಸ ಮಾಡಿದ ಶಾಸಕರು  ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಅಂತಹಾ ಶಾಸಕರಿಗೆ ಚಪ್ಪಲಿಯಿಂದ ಹೊಡೆಯಬೇಕು" ಎಂದು ಪಟೇಲ್ ಶನಿವಾರ ಎಎನ್‌ಐಗೆ ತಿಳಿಸಿದರು.

"ಚುನಾವಣೆಗೆ ಮುಂಚಿತವಾಗಿ ಅವರೇಕೆ ರಾಜೀನಾಮೆ ನೀಡುತ್ತಿದ್ದಾರೆ? ಎಲ್ಲವನ್ನೂ ತಿಳಿದಿದ್ದರೂ ಚುನಾವಣಾ ಆಯೋಗವೂ ಮೌನವಾಗಿದೆ. ರಾಜ್ಯಸಭೆಯಲ್ಲಿ ಬಿಜೆಪಿ ಬಹುಮತ ಪಡೆಯಲು ಪ್ರಯತ್ನಿಸುತ್ತಿದೆ. ನಾವು ಎರಡು ರಾಜ್ಯಸಭಾ ಸ್ಥಾನಗಳನ್ನು ಖಚಿತವಾಗಿ ಗೆಲ್ಲುತ್ತೇವೆ" ಎಂದು ಅವರು ಹೇಳಿದರು.

ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಈ ಬೆಳವಣಿಗೆ ನಂತರ ಕಾಂಗ್ರೆಸ್  ತನ್ನ ಶಾಸಕರನ್ನು ರಾಜ್ಯ ಮತ್ತು ರಾಜಸ್ಥಾನದ ವಿವಿಧ ರೆಸಾರ್ಟ್‌ಗಳಿಗೆ ಸ್ಥಳಾಂತರಿಸಿದೆ
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT