ಸಂಗ್ರಹ ಚಿತ್ರ 
ದೇಶ

ದೆಹಲಿಗರಿಗೆ ಮಾತ್ರವಲ್ಲ ಪ್ರತೀಯೊಬ್ಬರಿಗೂ ಚಿಕಿತ್ಸೆ ನೀಡಬೇಕು: ಕೇಜ್ರಿವಾಲ್ ನಡೆಗೆ ಲೆಫ್ಟಿನೆಂಟ್ ಗವರ್ನರ್ ತಿರುಗೇಟು!

ದೆಹಲಿಯಲ್ಲಿ ದೆಹಲಿ ನಿವಾಸಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಬೇಕು ಎಂಬ ಕಾರಣದಿಂದ ಆಸ್ಪತ್ರೆಗಳನ್ನು ಮೀಸಲಿಡುವ ಕೇಜ್ರಿವಾಲ್ ಸರ್ಕಾರದ ನಿರ್ಧಾರಕ್ಕೆ ಲೆಫ್ಟಿನೆಂಟ್ ಗವರ್ನರ್  ತಡೆ ನೀಡಿದ್ದು, ದೆಹಲಿಯಲ್ಲಿ ಪ್ರತೀಯೊಬ್ಬರಿಗೂ ಚಿಕಿತ್ಸೆ ದೊರೆಯಬೇಕು ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ದೆಹಲಿ ನಿವಾಸಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಬೇಕು ಎಂಬ ಕಾರಣದಿಂದ ಆಸ್ಪತ್ರೆಗಳನ್ನು ಮೀಸಲಿಡುವ ಕೇಜ್ರಿವಾಲ್ ಸರ್ಕಾರದ ನಿರ್ಧಾರಕ್ಕೆ ಲೆಫ್ಟಿನೆಂಟ್ ಗವರ್ನರ್  ತಡೆ ನೀಡಿದ್ದು, ದೆಹಲಿಯಲ್ಲಿ ಪ್ರತೀಯೊಬ್ಬರಿಗೂ ಚಿಕಿತ್ಸೆ ದೊರೆಯಬೇಕು ಎಂದು ಹೇಳಿದ್ದಾರೆ.

ಮಾರಕ ಕೊರೋನಾ ವೈರಸ್ ದೆಹಲಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ವ್ಯಾಪಕ ಕೊರತೆ ಎದುರಾಗಿತ್ತಿದೆ. ಇದೇ ಕಾರಣಕ್ಕೆ ಈ ಹಿಂದೆ ದೆಹಲಿ ಸರ್ಕಾರ ಅಲ್ಪ ಪ್ರಮಾಣದ ಸೋಂಕು ಮತ್ತು ಕೊರೋನಾ ಲಕ್ಷಣ ರಹಿತ ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಹೋಮ್ ಕ್ವಾರಂಟೈನ್ ನಲ್ಲಿರಿಸಿ ಚಿಕಿತ್ಸೆ ಪಡೆಯುವಂತೆ ಸೂಚಿಸಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಕೇಜ್ರಿವಾಲ್ ಸರ್ಕಾರ ದೆಹಲಿ ನಿವಾಸಿಗಳಿಗೆಂದೇ ಆಸ್ಪತ್ರೆಗಳನ್ನು ಮೀಸಲಿಟ್ಟಿದ್ದು, ಇತರ ರಾಜ್ಯಗಳ ರೋಗಿಗಳನ್ನು ನಿರ್ಬಂಧಿಸುವ ಕಾರ್ಯಕ್ಕೆ ಮುಂದಾಗಿತ್ತು.

ಆದರೆ ಕೇಜ್ರಿವಾಲ್ ಸರ್ಕಾರದ ಈ ನಡೆಯನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ತಡೆದಿದ್ದು, ದೆಹಲಿ ನಿವಾಸಿಗಳಲ್ಲದವರಿಗೂ ದೆಹಲಿಯಲ್ಲಿ ಚಿಕಿತ್ಸೆ ದೊರೆಯಬೇಕು ಎಂದು ಹೇಳಿ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೊರೋನಾ ಸಾಂಕ್ರಾಮಿಕದಂತಹ ಈ ಪರಿಸ್ಥಿತಿಯಲ್ಲಿ ತಾರತಮ್ಯ ಸರಿಯಲ್ಲ. ಕೇವಲ ಬೇರೆ ರಾಜ್ಯದವರು ಎಂಬ ಒಂದೇ ಕಾರಣಕ್ಕೆ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಹೇಳಿದ್ದಾರೆ. 

ಇದೇ ವೇಳೆ ಕೊರೋನಾ ಸಾಂಕ್ರಾಮಿಕ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿರುವ ಅನಿಲ್ ಬೈಜಲ್ ಅವರು, ಆರೋಗ್ಯ ಈ ದೇಶದ ಪ್ರತೀಯೊಬ್ಬ ಪ್ರಜೆಯ ಹಕ್ಕು. ಯಾವುದೇ ಕಾರಣಕ್ಕೂ ಅದನ್ನು ಯಾರೂ ನಿರಾಕರಿಸುವಂತಿಲ್ಲ. ಇದು ಸಂವಿಧಾನದ ಪ್ರಮುಖಾಂಶವಾಗಿದೆ. ಹೀಗಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರಗೆಳು ಯಾವುದೇ ರೀತಿಯ ತಾರತಮ್ಯ ಮಾಡದೇ ದೇಶದ ಪ್ರತೀಯೊಬ್ಬ ನಿವಾಸಿಗೂ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!