ರೈಲಿನಲ್ಲಿ ತಮ್ಮೂರಿಗೆ ಪ್ರಯಾಣಿಸುತ್ತಿರುವ ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯ ವಿತರಿಸುತ್ತಿರುವುದು 
ದೇಶ

ಇಟ್ಟುಕೊಂಡ ಗುರಿ 8 ಕೋಟಿ, ಆದರೆ ಆಹಾರ ಧಾನ್ಯ ತಲುಪಿದ್ದು ಕೇವಲ 20.26 ಲಕ್ಷ ವಲಸೆ ಕಾರ್ಮಿಕರಿಗೆ ಮಾತ್ರ!

ಲಾಕ್ ಡೌನ್ ಸಮಯದಲ್ಲಿ ರಾಜ್ಯ ಸರ್ಕಾರಗಳಿಗೆ 20.36 ಲಕ್ಷ ವಲಸೆ ಕೂಲಿ ಕಾರ್ಮಿಕರಿಗೆ ಮಾತ್ರ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ.

ನವದೆಹಲಿ: ಲಾಕ್ ಡೌನ್ ಸಮಯದಲ್ಲಿ ರಾಜ್ಯ ಸರ್ಕಾರಗಳಿಗೆ 20.36 ಲಕ್ಷ ವಲಸೆ ಕೂಲಿ ಕಾರ್ಮಿಕರಿಗೆ ಮಾತ್ರ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೇಷನ್ ಕಾರ್ಡು ಹೊಂದಿಲ್ಲದಿರುವ 8 ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಆಹಾರ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಿಂದ ತಿಳಿದುಬಂದಿದೆ.

ಕೊರೋನಾ ಲಾಕ್ ಡೌನ್ ನಿಂದಾಗಿ ವಲಸೆ ಕೂಲಿ ಕಾರ್ಮಿಕರು ಹಸಿವಿನಿಂದ ನರಳಬಾರದು ಎಂದು ಕೇಂದ್ರ ಸರ್ಕಾರ ಮೇ 14ರಂದು ಕುಟುಂಬದಲ್ಲಿ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ, 1 ಕೆಜಿ ಬೇಳೆ ನೀಡಬೇಕೆಂದು ಘೋಷಿಸಿತ್ತು. 20 ಲಕ್ಷ ಕೋಟಿ ರೂಪಾಯಿಗಳ ಕೇಂದ್ರ ಸರ್ಕಾರದ ಪ್ಯಾಕೇಜ್ ನಡಿ ಎರಡು ತಿಂಗಳಲ್ಲಿ 8 ಕೋಟಿ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಿಸುವ ಯೋಜನೆ ಇದಾಗಿತ್ತು.

ರೇಷನ್ ಕಾರ್ಡು ಇಲ್ಲದಿರುವವರಿಗೆ ದೇಶದ ಯಾವುದೇ ಭಾಗದಲ್ಲಿ ಉಚಿತವಾಗಿ ಅಕ್ಕಿ, ಬೇಳೆಕಾಳು ನೀಡುವ ಯೋಜನೆ ಇದಾಗಿದೆ.
ಈ ವಿತರಣೆ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆಹಾರ ಸಚಿವಾಲಯ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು 4.42 ಲಕ್ಷ ಟನ್ ಆಹಾರಧಾನ್ಯಗಳನ್ನು, 10,131 ಟನ್ ಆಹಾರಧಾನ್ಯಗಳನ್ನು 20.26 ಲಕ್ಷ ಫಲಾನುಭವಿಗಳಿಗೆ ವಿತರಿಸಿದ್ದಾರೆ. ಕೇವಲ ಶೇಕಡಾ 2.25ರಷ್ಟು ವಲಸೆ ಕಾರ್ಮಿಕ ಫಲಾನುಭವಿಗಳಿಗೆ ಮಾತ್ರ ಇದರ ಪ್ರಯೋಜನ ಸಿಕ್ಕಿದೆ. ಒಟ್ಟು 7.99 ಲಕ್ಷ ಟನ್  ಗುರಿಗೆ ಹೋಲಿಸಿದರೆ ಮೇ ಮತ್ತು ಜೂನ್ ತಿಂಗಳಲ್ಲಿ ಇದುವರೆಗೆ ಆಹಾರ ಧಾನ್ಯಗಳು ವಿತರಣೆಯಾಗಿದ್ದು ಬಹಳ ಕಡಿಮೆಯಾಗಿದೆ.

ಇನ್ನು 1.96 ಕೋಟಿ ವಲಸೆ ಕುಟುಂಬಗಳಿಗೆ ಎರಡು ತಿಂಗಳವರೆಗೆ 39 ಸಾವಿರ ಟನ್ ಬೇಳೆಕಾಳನ್ನು ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿ, 28,306 ಟನ್ ಬೇಳೆಕಾಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರವಾನಿಸಲಾಗಿದೆ. ಅದರಲ್ಲಿ ವಿತರಣೆಯಾಗಿದ್ದು ಕೇವಲ 15,413 ಟನ್ ಮಾತ್ರ ಎಂದು ಅಂಕಿಅಂಶ ಹೇಳುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

SCROLL FOR NEXT