ಸಾಂದರ್ಭಿಕ ಚಿತ್ರ 
ದೇಶ

ರಾಜ್ಯಸಭೆ ಚುನಾವಣೆ: ಗುಜರಾತ್ ಕಾಂಗ್ರೆಸ್ ಶಾಸಕರು ರಾಜಸ್ಥಾನದ ರೆಸಾರ್ಟ್ ಗೆ ಶಿಫ್ಟ್

ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತಿನ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್, ಮುಂದೆ ಸಂಭಾವ್ಯ ರಾಜೀನಾಮೆಯನ್ನು ತಪ್ಪಿಸುವ ಉದ್ದೇಶದಿಂದ ಉಳಿದ ಶಾಸಕರನ್ನು ನೆರೆ ರಾಜ್ಯ ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬು ರಸ್ತೆಯಲ್ಲಿರುವ ರೆಸಾರ್ಟ್ ಗೆ ಶಿಫ್ಟ್ ಮಾಡಲು ಸೋಮವಾರ ನಿರ್ಧರಿಸಿದೆ.

ಅಹಮದಾಬಾದ್: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತಿನ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್, ಮುಂದೆ ಸಂಭಾವ್ಯ ರಾಜೀನಾಮೆಯನ್ನು ತಪ್ಪಿಸುವ ಉದ್ದೇಶದಿಂದ ಉಳಿದ ಶಾಸಕರನ್ನು ನೆರೆ ರಾಜ್ಯ ರಾಜಸ್ಥಾನದ ಸಿರೋಹಿ ಜಿಲ್ಲೆಯ ಅಬು ರಸ್ತೆಯಲ್ಲಿರುವ ರೆಸಾರ್ಟ್ ಗೆ ಶಿಫ್ಟ್ ಮಾಡಲು ಸೋಮವಾರ ನಿರ್ಧರಿಸಿದೆ.

ಕಳೆದ ವಾರ ಕಾಂಗ್ರೆಸ್ ನ ಮೂವರು ಶಾಸಕರು ರಾಜೀನಾಮೆ ನೀಡಿದ್ದು, ಇದರೊಂದಿಗೆ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲ 65ಕ್ಕೆ ಇಳಿಕೆಯಾಗಿದೆ. ಈಗ ಮತ್ತಷ್ಟು ಶಾಸಕರ ಕುದುರೆ ವ್ಯಾಪಾರದ ಭೀತಿಯಿಂದ ಕಾಂಗ್ರೆಸ್ ಎರಡು ದಿನಗಳಿಂದ ತನ್ನ ಶಾಸಕರನ್ನು ವಿವಿಧ ರೆಸಾರ್ಟ್ ಗಳಿಗೆ ಶಿಫ್ಟ್ ಮಾಡಿದೆ.

ಭಾನುವಾರ ರಾತ್ರಿ ಕಾಂಗ್ರೆಸ್ ಉತ್ತರ ಗುಜರಾತ್ ನ ಸುಮಾರು 20 ಶಾಸಕರನ್ನು ಸಿರೋಹಿ ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದು, ಉಳಿದ ಶಾಸಕರನ್ನು ಸಿರೋಹಿ ರೆಸಾರ್ಟ್ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

"ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಎಲ್ಲ ಶಾಸಕರನ್ನು ಒಂದೇ ಸ್ಥಳದಲ್ಲಿ, ಸಿರೋಹಿಯಲ್ಲಿರುವ ರೆಸಾರ್ಟ್‌ಗೆ ಸ್ಥಳಾಂತರಿಸಲು ಪಕ್ಷ ನಿರ್ಧರಿಸಿದೆ. ಹಲವು ಶಾಸಕರು ಈಗಾಗಲೇ ರೆಸಾರ್ಟ್ ತಲುಪಿದ್ದಾರೆ, ಉಳಿದವರು ಇಂದು ಸಂಜೆ ವೇಳೆಗೆ ರೆಸಾರ್ಟ್ ತಲುಪುತ್ತಾರೆ" ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಬಿಜೆಪಿಯು ತನ್ನ ಶಾಸಕರನ್ನು ಬ್ಲಾಕ್‌ಮೇಲ್ ಮಾಡುವ, ಬೆದರಿಸುವ ಮತ್ತು ಹಣದ ಆಮಿಷವೊಡ್ಡುವ ಮೂಲಕ ರಾಜೀನಾಮೆ ಕೊಡಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

SCROLL FOR NEXT